ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ.
1 min read
ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ.
ಸುಬ್ರಹ್ಮಣ್ಯ, ಜೂನ್ 16: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನ ಗೊಂಡಿರುವುದಲ್ಲದೆ ಪಕ್ಕದ ಹರಿಯುತ್ತಿರುವ ನದಿಯ ಭಾಗಗಳಲ್ಲಿ ಕೂಡ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆ ಗೊಂಡಿರುತ್ತದೆ. ಇದನ್ನು ಮನಗಂಡ ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸ್ವಚ್ಛತಾ ಕಾರ್ಯಕ್ಕೆ ರವಿವಾರ ತೊಡಗಿದರು. ನದಿಯಲ್ಲಿ ಸ್ನಾನ ಮಾಡತಕ್ಕಂತಹ ತಳಭಾಗದಲ್ಲಿ ಬಿದ್ದಿದ್ದ ಸಾವಿರಾರು ಬಟ್ಟೆಗಳನ್ನ ಮೇಲಕ್ಕೆ ತಂದ ಸ್ವಯಂಸೇವಕರು ಟ್ರ್ಯಾಕ್ಟರ್ ನಲ್ಲಿ ಅದನ್ನು ತುಂಬಿಸಿ ಕೊಂಡೊಯ್ದರು.
ಭಕ್ತಾದಿಗಳು ತೀರ್ಥ ಸ್ಥಾನ ಮಾಡಿದಂತ ಸಂದರ್ಭದಲ್ಲಿ ದೇವಳದ ವತಿಯಿಂದ ಪ್ರತಿವರ್ಧಕದ ಮೂಲಕ ಎಷ್ಟೇ ಎಚ್ಚರಿಕೆ ನೀಡಿದರು ಮತ್ತೆ ಅದೇ ಚಾಳಿಯನ್ನು ಸ್ಥಾನ ಮಾಡತಕ್ಕಂಥ ಭಕ್ತಾದಿಗಳು ಮಾಡುತ್ತಿರುವುದು ವಿಷಾದನೆಯಾಗಿದೆ.
ಈ ನಿಟ್ಟಿನಲ್ಲಿ ಶ್ರೀ ದೇವಳದ ವತಿಯಿಂದ ಕಠಿಣ ಕ್ರಮವನ್ನು ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಸಾರ್ವಜನಿಕರು ತಿಳಿಯಪಡಿಸಿರುತ್ತಾರೆ. ಇಂದು ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ನ ಸಂಸ್ಥಾಪಕರು ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್ನ ಅಧ್ಯಕ್ಷರಾದ ಡಾ. ರವಿ ಕಕ್ಕೆ ಪದವು, ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ನಡುತೋಟ, ಸಮಾಜ ಸೇವಾ ಟ್ರಸ್ಟ್ ನ ಸದಸ್ಯರುಗಳು ಭಾಗವಹಿಸಿದ್ದರು.
ಈ ರೀತಿಯಾಗಿ ಸಂದೇಶಗಳು ಎಲ್ಲಾ ಮಾಧ್ಯಮಗಳಲ್ಲಿ ಪಸರಿಸಿ ಇನ್ನು ಮುಂದಕ್ಕೆ ಭಕ್ತಾದಿಗಳು ಹೊಳೆಯಲ್ಲಿ ಯಾವುದೇ ಬಟ್ಟೆ ಬರೆ ಗಳನ್ನು ಕಸ ಕಡ್ಡಿಗಳನ್ನು ಎಸೆ ಬಾರದಾಗಿ ಸ್ಪಷ್ಟ ಸಂದೇಶವನ್ನು ಈ ಮೂಲಕ ನೀಡಲಾಗಿದೆ . ಕೊಳಚೆ ಬಟ್ಟೆ ಬರೆಗಳನ್ನು ಕಸ ಕಡ್ಡಿಗಳನ್ನ ಹಾಕಿರುವುದರಿಂದ ಇದು ಜಲಚರಗಳಿಗೆ ಹಾಗೂ ಇನ್ನಿತರ ನೀರನ್ನ ಸೇವಿಸ್ತಕ್ಕಂತ ಪ್ರಾಣಿಗಳಿಗೆ ಪ್ರಾಣಕ್ಕೆ ಸಂಚಕಾರ ಬರಬಹುದು. ಅಲ್ಲದೆ ಇತ್ತೀಚೆಗೆ ಜಲಚರಗಳು ಮೊಸಳೆ ಹಾಗೂ ಇನ್ನಿತರ ಮೀನುಗಳು ಸತ್ತದನ್ನ ನಾವು ಕಣ್ಣಾರೆ ಕಂಡಿದ್ದೇವೆ. ಒಂದು ವೇಳೆ ಇದು ಹೀಗೆ ಮುಂದುವರಿದಲ್ಲಿ ಭಕ್ತಾದಿಗಳಿಗೆ ಗ್ರಾಮ ಪಂಚಾಯತಿ ಹಾಗೂ ದೇವಳದ ವತಿಯಿಂದ ದಂಡನೆ ವಿಧಿಸಬೇಕಾಗಿ ಸಾರ್ವಜನಿಕರು ಅಗ್ರಹಿಸಿದ್ದಾರೆ.