day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಎಲ್ಲಾ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಸಾಧ್ಯ : ಭರವಸೆಯ ಶಾಸಕಿ ನಯನಾ ಮೋಟಮ್ಮ.” – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

“ಎಲ್ಲಾ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಸಾಧ್ಯ : ಭರವಸೆಯ ಶಾಸಕಿ ನಯನಾ ಮೋಟಮ್ಮ.”

oplus_0

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪಟ್ಟಣದ ಬಿಳಗುಳ ಎಂ.ಎಚ್‍.ಪಿ.ಎಸ್ ಶಾಲೆಯಲ್ಲಿ ಶಾಸಕಿ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26/06/2024ರ ಬುಧವಾರ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ 27 ಮಂದಿ ಅರ್ಜಿದಾರರ ವಿವಿಧ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆಯಿತು.

ಆರಂಭದಲ್ಲಿಯೇ ಸಭೆಯಲ್ಲಿ ಜನರ ಸಂಖ್ಯೆ ಕಡಿಮೆ ಇರುವುದನ್ನು ಗಮನಿಸಿದ ಶಾಸಕಿ ನಯನಾ ಮೋಟಮ್ಮ ಅವರು,ತನ್ನ ಕ್ಷೇತ್ರದಲ್ಲಿ 1 ಪ.ಪಂ, 49 ಗ್ರಾ.ಪಂ.ಗಳಿವೆ. ಈಗಾಗಲೇ 33 ಕಡೆ ಜನಸ್ಪಂದನಾ ಸಭೆ ನಡೆಸಿದ್ದೇನೆ. ಅನೇಕ ಸಮಸ್ಯೆ ಬಗೆಹರಿಸಿದ್ದೇನೆ.ಇಂದು ನಡೆಯುವ ಸಭೆ ತನ್ನ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ ಎಂಬುದರ ಬಗ್ಗೆ ಅಧಿಕಾರಿಗಳು ಪ್ರಚಾರ ಮಾಡಿಲ್ಲ.ಅಧಿಕಾರಿಗಳೇ ಸಭೆ ನಡೆಸುತ್ತಾರೆಂಬ ಕಾರಣಕ್ಕೆ ಹಾಗೂ ಮಾಹಿತಿ ಕೊರತೆಯಿಂದ ಜನರ ಸಂಖ್ಯೆ ಕಡಿಮೆಯಾಗಿದೆ. ಸಾರ್ವಜನಿಕರು ಕಚೇರಿಗೆ ಹೋದಾಗ ಅಧಿಕಾರಿಗಳು ಸ್ಪಂದನೆ ನೀಡದೇ ಹಾಗೂ ಕೆಲಸ ಮಾಡಿಕೊಡದ ಕಾರಣಕ್ಕೆ ತನ್ನ ಬಳಿಗೆ ಬರುತ್ತಿದ್ದಾರೆ.ಇದು ನಿಲ್ಲಬೇಕೆಂದರೆ ತನ್ನೊಂದಿಗೆ ಎಲ್ಲಾ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಸಾಧ್ಯ ಎಂದು ಹೇಳಿದರು.

ತಾಲ್ಲೂಕಿನಲ್ಲಿ 50 ಎಕರೆ ಜಾಗ ಹುಡುಕಿ ನಿವೇಶನಕ್ಕೆ ಕಾಯ್ದಿರಿಸಿ ಅದನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.ಪಹಣಿ ಆಧಾರದಲ್ಲಿ ಜಾಗ ಗುರುತು ಮಾಡಲು ಹೋದರೆ ಅಲ್ಲಿ ಜಾಗವೇ ಇರುವುದಿಲ್ಲ.ಹಾಗಾಗಿ ಸರಕಾರಿ ಜಾಗ ಒತ್ತುವರಿ ಬಗ್ಗೆ ಗ್ರಾ.ಪಂ.ಗಳಲ್ಲಿ ರೆಜುಲೇಷನ್ ಮಾಡಿ,ಅದರ ವರದಿ ತನಗೆ ನೀಡಿದರೆ ಅದನ್ನು ಪರಿಶೀಲಿಸಿ ನಿವೇಶನಕ್ಕೆ ಜಾಗ ಕಾಯ್ದಿರಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಬಳಿಕ ಕರೆ ಒತ್ತುವರಿ,ಜಲ್ ಜೀವನ್ ಮಿಷನ್ ಕೆಲಸ ಮಾಡದಿರುವುದು,ಫಾರಂ ನಂ.53ರಲ್ಲಿ ಅಕ್ರಮ ಖಾತೆ ಮಂಜೂರು,ಬಾಕ್ಸ್ ಚರಂಡಿ,ತಡೆಗೋಡೆ,ಗಾಂಜಾ ಹಾವಳಿ,ಕಳಪೆ ಕಾಮಗಾರಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಾರ್ವಜನಿಕರು ಅರ್ಜಿ ಸಲ್ಲಿಸಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿದರು.ಅಲ್ಲದೆ ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ ನಿವೇಶನಕ್ಕೆ ಕಾಯ್ದಿರಿಸುವಂತೆ ಆಗ್ರಹಿಸಿದರು.

ಅಹವಾಲು ಆಲಿಸಿದ ಬಳಿಕ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ,ಅರ್ಜಿದಾರರ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಬಗೆಹರಿಸಲಾಗುವುದು.ಮುಖ್ಯವಾಗಿ ಸ್ಮಶಾನ ಮತ್ತು ನಿವೇಶನದ ಸಮಸ್ಯೆ ಅಧಿಕವಿದೆ ಇದನ್ನು ಬಗೆಹರಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಜಿ.ಪಂ.ಸಿಇಒ ಗೋಪಾಲಕೃಷ್ಣ ಮಾತನಾಡಿ,ಕಾಮಗಾರಿ ಕಳಪೆ ಮಾಡಿರುವುದನ್ನು ತನಿಖೆ ನಡೆಸಿ ಅಧಿಕಾರಿಗಳ ತಪ್ಪು ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರ ಸಮಸ್ಯೆ ಇದ್ದರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದರು.

ಹೆಸಗಲ್ ಗ್ರಾ.ಪಂ. ಅಧ್ಯಕ್ಷೆ ನಜ್ಮಾಬೇಗಂ,ಎಸ್‍ಪಿ ವಿಕ್ರಮ್ ಅಮಟೆ,ಡಿಸಿಎಫ್ ರಮೇಶ್‍ಬಾಬು,ತಹಸೀಲ್ದಾರ್ ಶೈಲೇಶ್ ಎಸ್.ಪರಮಾನಂದ,ತಾ.ಪಂ.ಇಒ ದಯಾವತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ‌.

9448305990.

About Author

Leave a Reply

Your email address will not be published. Required fields are marked *