“ಎರಡು ಜೀವಗಳ ಬಲಿಪಡೆದ ವಿದ್ಯುತ್ ತಂತಿ : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.”
1 min read
ವಿದ್ಯುತ್ ಶಾಕ್ನಿಂದಾಗಿ (Electric shock) ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ.ಮಂಗಳೂರಿನ ರೊಸಾರಿಯೋ ಶಾಲೆ ಬಳಿ ಈ ಘಟನೆ ನಡೆದಿದೆ. ರಾಜು ಮತ್ತು ದೇವರಾಜು ಮೃತ ಆಟೋ ಚಾಲಕರಾಗಿದ್ದಾರೆ.
ಬೆಳಗ್ಗೆ ಆಟೋ ಸ್ವಚ್ಛ ಮಾಡುತ್ತಿದ್ದಾಗ ಆಟೋ ಚಾಲಕ ವಿದ್ಯುತ್ ತಂತಿ ಸ್ಪರ್ಶಿಸಿದ್ದ.ಈ ಸಂದರ್ಭದಲ್ಲಿ ಆತನ ರಕ್ಷಣೆಗೆ ಮತ್ತೋರ್ವ ಚಾಲಕ ತೆರಳಿದಾಗ ಈ ವೇಳೆ ಇಬ್ಬರಿಗೂ ಕರೆಂಟ್ ಶಾಕ್ ಹೊಡೆದು,ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭಾರೀ ಗಾಳಿ ಮಳೆಗೆ ವಿದ್ಯುತ್ ತಂತಿ ಮುರಿದು ಬಿದ್ದಿತ್ತು. ಇದರ ಅರಿವು ಇರದೆ ರಾಜು ಹಾಗೂ ದೇವರಾಜು ವಿದ್ಯುತ್ ತಂತಿ ಮೇಲೆ ಕಾಲಿಟಿದ್ದರಿಂದ ಈ ಅವಘಡ ಸಂಭವಿಸಿದೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
✍🏻ಬರಹ ಕೃಪೆ.✍🏻
ಸಿದ್ದಿಕ್ ಚಕ್ಕಮಕ್ಕಿ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.