day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಮೂಡಿಗೆರೆ ತಾಲ್ಲೂಕನ್ನು ಪ್ರವಾಹ ಪೀಡಿತ ಪ್ರದೇಶವನ್ನಾಗಿ ಮಾಡಲು ಸರ್ಕಾರಕ್ಕೆ ಒತ್ತಾಯ : ಭರವಸೆಯ ಶಾಸಕಿ ನಯನಾ ಮೋಟಮ್ಮರಿಂದ ಹೇಳಿಕೆ : ಎ.ಜೆ.ಸುಬ್ರಾಯಗೌಡ.” – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

“ಮೂಡಿಗೆರೆ ತಾಲ್ಲೂಕನ್ನು ಪ್ರವಾಹ ಪೀಡಿತ ಪ್ರದೇಶವನ್ನಾಗಿ ಮಾಡಲು ಸರ್ಕಾರಕ್ಕೆ ಒತ್ತಾಯ : ಭರವಸೆಯ ಶಾಸಕಿ ನಯನಾ ಮೋಟಮ್ಮರಿಂದ ಹೇಳಿಕೆ : ಎ.ಜೆ.ಸುಬ್ರಾಯಗೌಡ.”

oplus_0

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚಿಕ್ಕಮಗಳೂರು (Chikkamagaluru) ಜಿಲ್ಲೆಯ, ಮೂಡಿಗೆರೆ (Mudigere) ತಾಲ್ಲೂಕಿನಲ್ಲಿ ಹೆಚ್ಚಾಗಿ ಮಳೆ ಬೀಳುವ ಜತೆಗೆಅಧಿಕ ಹಾನಿ ಸಂಭವಿಸಿದೆ.ಈ ಬಗ್ಗೆ ಶಾಸಕಿ ನಯನಾ ಮೋಟಮ್ಮ ಅವರು ಸರಕಾರದ ಗಮನ ಸೆಳೆಯುವ ಮೂಲಕ ಉತ್ತಮ ಕಾರ್ಯನಡೆಸುತ್ತಿದ್ದಾರೆಂದು
ತಾ.ಪಂ.ಮಾಜಿ ಅಧ್ಯಕ್ಷ ಎ.ಜೆ.ಸುಬ್ರಾಯಗೌಡ ಹೇಳಿದರು.
ಅವರು ದಿನಾಂಕ 29/07/2024ರ ಸೋಮವಾರ ನಮ್ಮ ವಾಹಿನಿಯೊಂದಿಗೆ ಮಾತನಾಡಿ,ಕಸಬಾ,ಗೊಣಿಬೀಡು, ಬಾಳೂರು,ಬಣಕಲ್ ಹೋಬಳಿ ವ್ಯಾಪ್ತಿಯಲ್ಲಿ 75ಕ್ಕೂ ಅಧಿಕ ಮನೆಗಳು ಕುಸಿದಿದೆ.ರಸ್ತೆ,ಸೇತುವೆ ಹಾನಿಗೊಳಗಾಗಿವೆ. ಹಾಗಾಗಿ ಶಾಸಕಿನಯನಾ ಮೋಟಮ್ಮ ಅವರು ಸರಕಾರದ ಗಮನ ಸೆಳೆದು ಈಗಾಗಲೇ ಶೇ.100ರಷ್ಟು ಹಾನಿಗೊಳಗಾದ 30 ಮನೆಗೆ 1.2 ಲಕ್ಷ ರೂ ರೂ ಪರಿಹಾರದ ಹಣ ವಿತರಿಸಲಾಗಿದೆ.ಅಲ್ಲದೇ ಬಹುತೇಕ ಮನೆಗಳಿಗೆ ಹಕ್ಕು ಪತ್ರ ಇಲ್ಲದಿದ್ದರೂ ಪರಿಹಾರ ನೀಡಲಾಗಿದೆ.ಬೆಳೆಹಾನಿ ಪರಿಹಾರದ ಬಗ್ಗೆ ರೈತರ ಬೇಡಿಕೆಯಿದೆ.

ಉದುಸೆ,ಬೆಟ್ಟದಮನೆ,ಹಿರೇಶಿಗರ,ದೊಣಗೂಡು ಸೇರಿದಂತೆ ಹೇಮಾವತಿ ನದಿ ತೀರದ ಪಕ್ಕದಲ್ಲಿರುವ ಎಲ್ಲಾ ಕಾಫಿ ತೋಟಗಳಲ್ಲಿ ಕಾಫಿ ಕೊಳೆ ರೋಗದ ಜತೆಗೆ ಫಸಲಿಗೆ ಬಂದಿದ್ದ ಕಾಫಿ ಕಾಯಿ ಉದುರುತ್ತಿದೆ.ಈ ಬಗ್ಗೆ ಅಧಿಕಾರಿಗಳು ಸರ್ವೆ ನಡೆಸಿ ವರದಿ ನೀಡಿದ ಬಳಿಕ ಪರಿಹಾರ ದೊರಕಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಮಳೆಯಿಂದ ಜಿಲ್ಲಾಧ್ಯಂತ ಜನರು ವಿದ್ಯುತ್ ಸಮಸ್ಯೆ ಎದುರಿಸಬಾರದೆಂದು ಜಿಲ್ಲೆಗೆ 500 ಮಂದಿ ಮಾನ್ಸೂನ್ ಗ್ಯಾಂಗ್‌ಮೆನ್‌ಗಳನ್ನು ನೇಮಕ ಮಾಡಿದ್ದಾರೆ.ತಾಲ್ಲೂಕಿನಲ್ಲಿ ಆಗಿರುವ ಹಾನಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.ಅಲ್ಲದೇ ನಯನಾ ಮೋಟಮ್ಮ ಅವರು ಶಾಸಕರಾದ ಬಳಿಕ ತಾಲ್ಲೂಕಿನ ಅಂಗನಾಡಿ ಕಟ್ಟಡ,ಶಾಲೆ ದುರಸ್ತಿ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಕ್ಕೆ 40 ಕೋಟಿ ರೂಪಾಯಿ ಅನುದಾನ ತಂದಿದ್ದಾರೆ.ಈಗ ತಾಲ್ಲೂಕನ್ನು ಪ್ರವಾಹ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ಸರಕಾರಕ್ಕೆ ಒತ್ತಡ ಹಾಕುವ ಜೊತೆಗೆ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಹೆಚ್ಚಿನ ಅನುದಾನ ತಂದು ಹಾನಿ ಸಮಸ್ಯೆ ನಿಭಾಯಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ.ಅವರ ಶ್ರಮಕ್ಕೆ ಕಾಂಗ್ರೆಸ್‌ನ ಎಲ್ಲಾ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆಂದು ಹೇಳಿದರು.

ಈ ಸಂದರ್ಭದಲ್ಲಿ ಹಂತೂರು ಗ್ರಾ.ಪಂ. ಸದಸ್ಯ ಡಿ.ಜಿ.ರಮೇಶ್ ಪಟೇಲ್,ಮುಖಂಡ ಡಿ.ಕೆ.ಶಂಕರೇಗೌಡ ಉಪಸ್ಥಿತರಿದ್ದರು.

✍️ಬರಹ ಕೃಪೆ.✍️

ಸಿದ್ದಿಕ್ ಚಕ್ಕಮಕ್ಕಿ.

7847891857.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *