AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಜೇತರು*

1 min read

*ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಜೇತರು*
ಚಿಕ್ಕಮಗಳೂರು ೨೮: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕವು, ಸ್ವಾತಂತ್ರ್ಯೋತ್ಸವದ ನೆನಪಿಗಾಗಿ, ಭಾರತೀಯ ಸ್ವಾತಂತ್ರ್ಯದ ಹೋರಾಟದಲ್ಲಿ ದುಡಿದು ಮಾಡಿದ ಮಹನೀಯರ ಸಂಸ್ಮರಣೆಗಾಗಿ , ರಾಜ್ಯಾದ್ಯಂತ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ಮೂಲಕ ಇತ್ತೀಚಿಗಷ್ಟೇ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೂಡಿಗೆರೆ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಅನ್ವಿತ್ ಹೆಚ್ ಎಸ್ ಗೌಡ ರಾಜ್ಯಮಟ್ಟದಲ್ಲಿ ಸಮಾಧಾನಕರ ಬಹುಮಾನ ಗಳಿಸಿಕೊಂಡಿದ್ದು ಜಿಲ್ಲೆಗೆ ಹೆಸರು ತಂದಿದ್ದಾನೆ.ಹಾಗೂ ಚಿಕ್ಕಮಗಳೂರು ಜಿಲ್ಲಾಮಟ್ಟದಲ್ಲಿ ಇದೇ ಬೆಥನಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಝೆಹೆರ್ ಮತ್ತು 9ನೇ ತರಗತಿ ವಿದ್ಯಾರ್ಥಿ ಅರ್ಮಾನ್ ನವಾಜ್ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಆಲ್ದೂರು ಪೂರ್ಣಪ್ರಜ್ಞಾ ಎಜುಕೇಶನ್ ಸೊಸೈಟಿಯ 9ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ಹೆಚ್. ಎಂ ತೃತಿಯ ಸ್ಥಾನ ಗಳಿಸಿದ್ದಾರೆ. ರಾಜ್ಯಾದ್ಯಂತ ಸುಮಾರು 15 ಸಾವಿರ ವಿದ್ಯಾರ್ಥಿಗಳು, ಜಿಲ್ಲೆಯಿಂದ 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.ವಿಜೇತ ವಿದ್ಯಾರ್ಥಿಗಳಿಗೆ ನಗದು ಹಣ, ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ ಭಾಗಿಯಾದ ಎಲ್ಲ ವಿದ್ಯಾರ್ಥಿಗಳು,ಸಂಯೋಜಕರು, ಶಾಲಾ ಮುಖ್ಯೋಪಾಧ್ಯಾಯರುಗಳಿಗೆ ವರ್ಣರಂಜಿತವಾದ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಗುವುದು. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾ ಸಂಯೋಜಕರಾಗಿ ದುಡಿದ ಶಿಕ್ಷಕಿ ತಮ್ಮನ್ನಾ ಮುನಾವರ್ ಮತ್ತು ತಾಂತ್ರಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ ಪೂಜಾದೇವಿ ಎಂ.ಡಿ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮತ್ತು ತಾಲೂಕು ಮತ್ತು ಶಾಲಾ ಹಂತಗಳಲ್ಲಿ ಸಂಯೋಜಕರಾಗಿ ದುಡಿದು ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಡಿ.ಎಂ.ಮಂಜುನಾಥಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *