ಮೂಡಿಗೆರೆ ಬಾಳೂರು ಅರಣ್ಯದಲ್ಲಿ ಮೋಟಾರ್ ರ್ಯಾಲಿ ಗಾಡ ನಿದ್ದೆಯಲ್ಲಿ ಅರಣ್ಯ ಅಧಿಕಾರಿಗಳು.
1 min read
ಮೂಡಿಗೆರೆ ಬಾಳೂರು ಅರಣ್ಯದಲ್ಲಿ ಮೋಟಾರ್ ರ್ಯಾಲಿ
ಗಾಡ ನಿದ್ದೆಯಲ್ಲಿ ಅರಣ್ಯ ಅಧಿಕಾರಿಗಳು.
ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ, ಮೂಡಿಗೆರೆ ವಲಯದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಎತ್ತಿನಭುಜ ದಟ್ಟಾರಣ್ಯ ರಸ್ತೆಯಲ್ಲಿ ಫೋರ್ ವೀಲ್ ಡ್ರೈವ್ ಮೋಟಾರು ರ್ಯಾಲಿ ನೆಡೆಯುತ್ತಿದೆ.
ನೂರಕ್ಕೂ ಹೆಚ್ಚು ವಾಹನಗಳು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೋಗುತ್ತಿವೆ.
ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಗುಪ್ತವಾಗಿ ಕಾರ್ ರ್ಯಾಲಿ . ಈ ಕುರಿತು ಮೂಡಿಗೆರೆ ವಲಯ ಅರಣ್ಯಾಧಿಕಾರಿಯಾಗಲೀ ಅಥವಾ ತಳಮಟ್ಟದ ಸಿಬ್ಬಂದಿಗಳಾಗಲೀ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅರಣ್ಯ ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪದಿಂದಾಗಿ, ಸಕಲೇಶಪುರ, ಚಿಕ್ಕಮಗಳೂರು, ಮೂಡಿಗೆರೆ ತಾಲ್ಲೂಕಿನ ಜನರು ಮೋಜಿನ ಕ್ರೀಡೆಯಲ್ಲಿ ಭಾಗಿಯಾಗುವುದರ ಮೂಲಕ ಅರಣ್ಯ ಕಾನೂನುಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅತೀವೇಗದ ವಾಹನಗಳ ಸದ್ದು ವನ್ಯಜೀವಿಗಳಿಗೆ ಕಂಟಕವಾಗಲಿದೆ. ಈ ಭಾಗವು ಆನೆ ಕಾರಿಡಾರ್ ಆಗಿದ್ದು, ಆನೆಗಳು ಅಕ್ಕಪಕ್ಕದ ಹಳ್ಳಿಗಳಿಗೆ ನುಗ್ಗುವ ಸಾಧ್ಯತೆ ಇದೆ. ಅಲ್ಲಿನ DFO ರಮೇಶ್ ಬಾಬು ಎಂಬ ಅಧಿಕಾರಿಯು ತನಗೂ ಇದಕ್ಕೂ ಸಂಬಂಧವೇ ಇಲ್ಲದಂತಿದ್ದಾರೆ. ತುರ್ತಾಗಿ ವಾಹನಗಳನ್ನು ಜಪ್ತಿ ಮಾಡಿ, ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದವರ ಮೇಲೆ ಕಠಿಣ ಕ್ರಮ ಜರುಗಿಸಲು ಪರಿಸರ ಪ್ರೇಮಿಗಳು ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದಾರೆ.