AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರೈತರು ಸಾಗುವಾಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ

1 min read

ರೈತರು ಸಾಗುವಾಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ

ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ಹೊಳೆಹೊನ್ನೂರು ಹೋಬಳಿಯ ರೈತರು ಸಾಗುವಾಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ಹಮ್ಮಿಕೊಂಡಿದ್ದ ನಗರದ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡುತ್ತಾ..

ಅರಣ್ಯ ಇಲಾಖೆಯವರು ದೌರ್ಜನ್ಯದಿಂದ 40-50 ವರ್ಷಗಳಿಂದ ಸಾಗುವಾಳಿ ಮಾಡುತ್ತಿರುವ ಸಾಗುವಾಳಿ ಹಕ್ಕುಪತ್ರ ಇರುವಂತ ಬಡ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವೇ ಕೊಟ್ಟಂತ ಹಕ್ಕುಪತ್ರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಲೆಕ್ಕಿಸದೆ ಈ ಕೆಲಸ ಮಾಡುತ್ತಿರುವುದು ಖಂಡನೀಯ. ಅರಣ್ಯ ಮಂತ್ರಿಗಳು 3ಎಕರೆಗಿಂತ ಒಳಗಿರುವ ರೈತರನ್ನು ಒಕ್ಕಲೆಬ್ಬಸುವುದಿಲ್ಲವೆಂದು ಹೇಳಿದ್ದರು, ಆದರೆ ಅರಣ್ಯ ಅಧಿಕಾರಿಗಳು 30-40ವರ್ಷಗಳಿಂದ ಸಾಗುವಾಳಿ ಮಾಡುತ್ತಿರುವವರನ್ನ ಒಕ್ಕಲೆಬ್ಬಿಸುತ್ತಿದ್ದಾರೆ. ಇದರ ವಿರುದ್ಧ ಅರಣ್ಯ ಮಂತ್ರಿಗಳು ತಕ್ಷಣವೇ ಕ್ರಮಕೈಗೊಳ್ಳಬೇಕು ಮತ್ತು ರೈತ ಮುಖಂಡರ ಸಭೆ ಕರೆದು ಚರ್ಚಿಸಿ ತೀರ್ಮಾನಿಸಬೇಕು. ಇಷ್ಟು ವರ್ಷಗಳಿಂದ ಸಾಗುವಾಳಿ ಮಾಡಿಕೊಂಡು ಬರುತ್ತಿರುವ ನಮ್ಮ ಜಮೀನನ್ನ ನಾವು ಬಿಟ್ಟು ಕೊಡುವುದಿಲ್ಲ. ಒಂದು ವೇಳೆ ಇದು ಮುಂದುವರಿದರೆ ರೈತರ ಉಗ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದರು.

ಈ ಸಂಧರ್ಭದಲ್ಲಿ
ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಹಿಟ್ಟೂರು ರಾಜು,
ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ,
ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇಪ್ಪ,
ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್,
ತಾಲ್ಲೂಕು ಅಧ್ಯಕ್ಷರಾದ ಸಿ.ಚಂದ್ರಪ್ಪ,
ಭದ್ರಾವತಿ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ,
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದ ಪೂರ್ಯ ನಾಯ್ಕ್,
ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ,
ಹಾಗೂ ಎಲ್ಲಾ ಮುಖಂಡರು, ರೈತರು‌ ಹಾಜರಿದ್ದರು.

About Author

Leave a Reply

Your email address will not be published. Required fields are marked *