ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಾಣ.
1 min read
26.11.2024 ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಬಣಕಲ್ ನ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನದ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೂರ್ವ ಪೀಠವನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಪೂರ್ವ ಪೀಠಿಕೆಯ ಸಮಾಜ ವಿಜ್ಞಾನದ ವಿಷಯ ಶಿಕ್ಷಕಿಯಾದ ಲೀಲಾಮಣಿ ಪಿ.ವಿ ಬೋಧಿಸಿ ಸ್ವಾತಂತ್ರ್ಯ ,ಸಮಾನತೆ, ಜಾತ್ಯಾತೀತತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಇದರೊಂದಿಗೆ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಮತ್ತು ಉಪನ್ಯಾಸಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ . ಅಡುಗೆ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.