ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಾಣ
1 min read
26.11.2024 ರಂದು ಚಿಕ್ಕಮಗಳೂರು ಜಿಲ್ಲೆ.ಮೂಡಿಗೆರೆ ತಾಲ್ಲೂಕು. ಬಣಕಲ್ ನ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೂರ್ವ ಪೀಠಿಕೆಯನ್ನು ಬೋಧಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂವಿಧಾನದ ಪೂರ್ವ ಪೀಠಿಕೆಯನ್ನು ಸಮಾಜ ವಿಜ್ಞಾನ ವಿಷಯ ಶಿಕ್ಷಕಿಯಾದ ಲೀಲಾಮಣಿ. ಪಿ.ವಿ ಬೋಧಿಸಿ ಸ್ವಾತಂತ್ರ್ಯ , ಸಮಾನತೆ, ಜಾತ್ಯಾತೀತ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ಮಾಹಿತಿಯನ್ನು ತಿಳಿಸಿಕೊಟ್ಟರು. ಇದರೊಂದಿಗೆ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಾಲತಿ .ಟಿ.ಆರ್ ಹಾಗೂ ಉಪಮುಖ್ಯ ಶಿಕ್ಷಕರಾದ ವಸಂತ್. ಸಹ ಶಿಕ್ಷಕರುಗಳಾದ ಭಕ್ತೇಶ್.ಶೇಖರಪ್ಪ.ಗೀತಾ.ಕಮಲಮ್ಮ.ಲಿಂಗರಾಜ್.ಶ್ವೇತಾ.ಪದ್ಮಶ್ರೀ.ವಿಜಯೇಂದ್ರ.ಪ್ರತಾಪ್.ಅಶ್ವಿತ.ಆಶಾ.ಅನುಷ.ಅನುಪ.ಆರೋಗ್ಯವಾಣಿ.ಶಾಲಾ ಅಡುಗೆ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.