AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಕರ್ನಾಟಕದಲ್ಲಿ ಮಾರಾಟವಾಗುತ್ತಿದೆ ಕಳಪೆ ಉಪ್ಪು*

*ಗೋಬಿ, ಕಾಟನ್ ಕ್ಯಾಂಡಿ ಆಯ್ತು ಈಗ ಉಪ್ಪಿನ ಸರದಿ!*

ಪಾನಿಪುರಿ, ಗೋಬಿ ಮಂಚೂರಿ, ಕಬಾಬ್ ನಿಷೇಧದ ನಂತರ ಇದೀಗ ಉಪ್ಪಿನ ಸರದಿ. ನಾವು ದಿನನಿತ್ಯ ಬಳಸುವ ಉಪ್ಪು ಕೂಡ ಸುರಕ್ಷಿತವಲ್ಲ ಎನ್ನುವ ಆಘಾತಕಾರಿ ಮಾಹಿತಿ ಈಗ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಖುದ್ದು ಆಹಾರ ಮತ್ತು ಸುರಕ್ಷತಾ ಇಲಾಖೆಯೇ ಬಹಿರಂಗಪಡಿಸಿದೆ.

ಅಡುಗೆಗೆ ಬಳಸುವ ಉಪ್ಪಿನಲ್ಲಿ ಕೂಡ ಈಗ ಕಲಬೆರೆಕೆ ಆಗುತ್ತಿದೆ ಎಂಬುದು ಗೊತ್ತಾಗಿದೆ. ಈ ಆಘಾತಕಾರಿ ವಿಚಾರವನ್ನು ಖುದ್ದು ಆಹಾರ ಮತ್ತು ಸುರಕ್ಷತಾ ಇಲಾಖೆ ಬಹಿರಂಗಪಡಿಸಿದೆ.

ಆಹಾರ ಮತ್ತು ಸುರಕ್ಷತೆ ಇಲಾಖೆಯ ಗುಣಮಟ್ಟ ಸಮರ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧದಿಂದ ತೊಡಗಿ ಪಾನಿಪುರಿ ತನಕ ಬಂದು ನಿಂತಿದೆ. ‘ಈಟ್ ರೈಟ್’ ಎಂಬ ಅಭಿಯಾನ ಆರಂಭಿಸಿರುವ ಆಹಾರ ಮತ್ತು ಸುರಕ್ಷತಾ ಇಲಾಖೆ, ರಾಜ್ಯದಲ್ಲಿ ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷೆ ನಡೆಸುತ್ತಿದೆ. ಕಾಟನ್ ಕ್ಯಾಂಡಿಯಲ್ಲಿ ಬಳಸುವ ಕೃತಕ ಬಣ್ಣದಲ್ಲಿ ರೋಡಮೈನ್ ಬಿ ಅಂಶ ಇರುವುದು ಪತ್ತೆಯಾಗಿತ್ತು. ಇದು ಕ್ಯಾನ್ಸರ್​​​ಕಾರಕ ಎಂದು ತಿಳಿದು, ಬಣ್ಣ ಬಳಕೆಗೆ ಕಡಿವಾಣ ಹಾಕಲಾಯಿತು. ನಂತರ ಗೋಬಿ ಮಂಚೂರಿ, ಕಬಾಬ್​ಗೆ ಕೃತಕ ಬಣ್ಣ ಬಳಸಿದರೆ, 10 ಲಕ್ಷ ರೂ. ದಂಡ ವಿಧಿಸುವ ಆದೇಶವೂ ಹೊರಬಿತ್ತು. ಪಾನಿಪುರಿಗೆ ಬಳಸುವ ಪಾನಿ ಕೂಡ ಸುರಕ್ಷಿತವಲ್ಲ ಎಂಬುದು ಲ್ಯಾಬ್ ಟೆಸ್ಟ್ ವರದಿಯಲ್ಲಿ ತಿಳಿಯಿತು. ಇಲ್ಲಿಗೆ ಸಮರ ನಿಲ್ಲಿಸದ ಆಹಾರ ಮತ್ತು ಸುರಕ್ಷತಾ ಇಲಾಖೆ ಉಪ್ಪಿನ ಪರೀಕ್ಷೆಗೆ ಇಳಿಯಿತು. ಮುಖ್ಯವಾಗಿ ರಾಜಧಾನಿಯ ಹಾಸ್ಟೆಲ್ ಹಾಗೂ ಪಿಜಿಗಳಿಗೆ ಭೇಟಿ ನೀಡಿ ಉಪ್ಪಿನ ಮಾದರಿ ಪಡೆಯಲಾಯಿತು. 2,300 ಮಾದರಿಗಳ ಪರೀಕ್ಷೆಯಿಂದ ಉಪ್ಪು ಕೂಡ ಕಳಪೆ ಎಂಬ ವಿಚಾರ ಬಯಲಾಗಿದೆ.

*ಉಪ್ಪಿನಲ್ಲಿ ಅಯೋಡಿನ್ ಕೊರತೆ, ಸೀಮೆಸುಣ್ಣ, ಸಿಂಥೆಟಿಕ್ ಪೊಟ್ಯಾಸಿಯಮ್ ಕ್ಲೋರೈಡ್‌ ಪತ್ತೆ*

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಉಪ್ಪಿನ ಮಾದರಿಗಳನ್ನು ಸಂಗ್ರಹಿಸಲು ಮುಂದಾದ ಆಹಾರ ಮತ್ತು ಸುರಕ್ಷತಾ ಇಲಾಖೆಗೆ, ಉಪ್ಪಿನಲ್ಲಿ ಅಯೋಡಿನ್ ಕೊರತೆ ಇರುವುದು ಲ್ಯಾಬ್ ಟೆಸ್ಟ್​ಗಳಲ್ಲಿ ಪತ್ತೆಯಾಗಿದೆ. ಅಷ್ಟೆ ಅಲ್ಲ, ಈ ಉಪ್ಪಿನಲ್ಲಿ ಸೀಮೆಸುಣ್ಣ, ಸಿಂಥೆಟಿಕ್ ಪೊಟ್ಯಾಸಿಯಮ್ ಕ್ಲೋರೈಡ್‌ನಂತಹ ರಾಸಾಯನಿಕಗಳ ಅಂಶ ಇರುವುದು ತಿಳಿದು ಬಂದಿದೆ. ಅಯೋಡಿನ್ ಮಾನವ ದೇಹಕ್ಕೆ ಅತ್ಯಂತ ಮುಖ್ಯವಾದ ಖನಿಜವಾಗಿದೆ. ಅದರ ಕೊರತೆಯು ಹಲವಾರು ಕಾಯಿಲೆಗಳಿಗೆ ಕಾರಣವಾಗಬಹುದು. ದೇಹದಲ್ಲಿ ಅಯೋಡಿನ್ ಪ್ರಮಾಣವು ಕಡಿಮೆಯಾಗಿ ಅನೇಕ ಖಾಯಿಲೆಗಳು ಕಾಣಿಸಿಕೊಳ್ಳಬಹುದು. ಆರೋಗ್ಯವಂತ ಮಕ್ಕಳು ಅನಾರೋಗಕ್ಕೀಡಾಗಬಹುದು. ಇದೀಗ ಉಪ್ಪಿನಲ್ಲಿ ಅಯೋಡಿನ್ ಕೊರತೆ, ಇತರ ರಾಸಾಯನಿಗಳು ಇರುವುದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ತಿನ್ನುವ ಉಪ್ಪು ಕೂಡ ಕಳಪೆ ಎಂಬುದು ಗೊತ್ತಾಗಿದ್ದು, ಅಧಿಕಾರಿಗಳನ್ನು ದಂಗು ಬಡಿಸಿದೆ. ಇದರ ಬೆನ್ನಲ್ಲೇ, ಕಳಪೆ ಆಹಾರ ವಿರುದ್ಧದ ಸಮರ ತೀವ್ರಗೊಳಿಸಲು ಇಲಾಖೆ ನಿರ್ಧರಿಸಿದೆ.

About Author

Leave a Reply

Your email address will not be published. Required fields are marked *