AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಲಿತರು ದೇವಸ್ಥಾನದ ಕಾಂಪೌಂಡ್ ಪ್ರವೇಶ, ದೇಗುಲಕ್ಕೆ ಬೀಗ, ಎರಡೂವರೆ ಲಕ್ಷ ದಂಡ.

1 min read

ದಲಿತರು ದೇವಸ್ಥಾನದ ಕಾಂಪೌಂಡ್ ಪ್ರವೇಶ, ದೇಗುಲಕ್ಕೆ ಬೀಗ, ಎರಡೂವರೆ ಲಕ್ಷ ದಂಡ.

ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಹೋದರು ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಘಟನೆ ನಡೆದಿದೆ .
ಚಿಕ್ಕಮಗಳೂರು.ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಎರಡು ದಿನದ ಹಿಂದೆ ಬಿ.ಕೋಡಿಹಳ್ಳಿ ಗ್ರಾಮದ ಮಂಜಪ್ಪ ಹಾಗೂ ಮದನ್ ಗ್ರಾಮದ ಆಂಜನೇಯ ದೇವಸ್ಥಾನದ ಕಾಂಪೌಂಡ್ ಒಳಗೆ ಹೋಗಿದ್ದರು.
ಗ್ರಾಮದ ಸವರ್ಣೀಯರು ಆ ಇಬ್ಬರಿಗೂ ದಂಡ ಹಾಕಿ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ. ಎರಡು ದಿನದಿಂದ ಆಂಜನೇಯನಿಗೆ ಪೂಜೆ ಕೂಡ ನಿಂತಿದೆ.
ದೇವಸ್ಥಾನದ ಗರ್ಭಗುಡಿ ಹಾಗೂ ಕಾಂಪೌಂಡ್ ಶುದ್ಧೀಕರಣಕ್ಕಾಗಿ ಎರಡೂವರೆ ಲಕ್ಷ ನೀಡಿದರೆ ದೇವಸ್ಥಾನದಲ್ಲಿ ಮತ್ತೆ ಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ. ದೇವಸ್ಥಾನಕ್ಕೆ ಎರಡೂವರೆ ಲಕ್ಷ ಹಣ ನೀಡಿ ನೀವು ಕಾಂಪೌಂಡ್ ನಿಂದ ಹೊರಗೆ ನಿಂತು ಪೂಜೆ ಮಾಡಿಸಿಕೊಳ್ಳಬೇಕು ಎಂದೂ ತಾಕೀತು ಮಾಡಿದ್ದಾರೆ.
ದೇವಸ್ಥಾನದ ಕಾಂಪೌಂಡ್ ಒಳ ಹೋಗಿದ್ದಕ್ಕೆ ಗ್ರಾಮಸ್ಥರು ದೇವಸ್ಥಾನಕ್ಕೆ ಬೀಗ ಹಾಕಿ, ದಂಡ ಹಾಕಿದ್ದಾರೆ ಎಂದು ಆರೋಪಿಸಿ ಮಂಜಪ್ಪ ತಹಶೀಲ್ದಾರ್ ಗೆ ದೂರು ನೀಡಿದ್ದಾರೆ.

 

About Author

Leave a Reply

Your email address will not be published. Required fields are marked *