लाइव कैलेंडर

February 2025
M T W T F S S
 12
3456789
10111213141516
17181920212223
2425262728  
06/02/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರಾಜ್ಯದ ನಿಲುವು ಸ್ಪಷ್ಟಪಡಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ.

1 min read

ರಾಜ್ಯದ ನಿಲುವು ಸ್ಪಷ್ಟಪಡಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಆತಂಕದಿಂದ ಪಾರಾದ ಪಶ್ಚಿಮಘಟ್ಟದ ಜನತೆ
ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ಕರ್ನಾಟಕ

”ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ. ಕಸ್ತೂರಿರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದ್ದು ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ,” ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರ ಜತೆ ಮಾತನಾಡಿದ ಅವರು ರಾಜ್ಯದ ನಿಲುವು ಸ್ಪಷ್ಟಪಡಿಸಿದರು. “ಶತಮಾನಗಳಿಂದ ಜನರು ಅರಣ್ಯದಂಚಿನಲ್ಲಿ ವಾಸಿಸುತ್ತಿದ್ದು, ಇವರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ,” ಎಂದು ಅವರು ತಿಳಿಸಿದರು.

“ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆ ನಡೆಸಲು ಸಮಿತಿಗಳನ್ನು ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ,” ಎಂದರು.

“ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದ ಕಡಮಕಲ್ಲು- ಕೊಡಗಿನ ಗಾಳಿಬೀಡು ಸಂಪರ್ಕ ರಸ್ತೆ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಚರ್ಚಿಸಿ ರಸ್ತೆ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಕುಮಾರಪರ್ವತಚಾರಣಿಗರಿಗೆ ಸೌಲಭ್ಯ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಕಾಡಾನೆ ದಾಳಿ ನಿಯಂತ್ರಿಸಲು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸುತ್ತೇನೆ,” ಎಂದರು.

“ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾರ್ಚ್‌ವರೆಗಿನ ವರದಿ. ಆ ಸಮಯದಲ್ಲಿ ಈ ಹಿಂದಿನ ಸರಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. 2023ರಿಂದ 2025ರಲ್ಲಿ ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಸ್ತಿಯಾಗುವ ವಿಶ್ವಾಸ ಇದೆ,” ಎಂದರು.

ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಆ್ಯಂಟನಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ಆ‌ರ್.ಎಫ್ಒಗಳಾದ ವಿಮಲ್ ಬಾಬು, ಮಂಜುನಾಥ್, ಸಂದ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *