लाइव कैलेंडर

February 2025
M T W T F S S
 12
3456789
10111213141516
17181920212223
2425262728  
06/02/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು ನಾಲ್ಕು ಜನ ಶಿಕ್ಷಕರಿಗೆ ಪ್ರಸಸ್ತಿ….
ಅಕ್ಷರ ಕ್ರಾಂತಿಯ ಹರಿಕಾರರಾದ ಸಾವಿತ್ರಿಬಾಯಿ ಪುಲೆ~ ಜ್ಯೋತಿಬಾ ಪುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಭಾಜನ*

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ರಾಜ್ಯ ಘಟಕ ಮತ್ತು ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ, ಅಕ್ಷರದ ಹರಿಕಾರರಾದ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಪುಲೆ ಹೆಸರಿನಲ್ಲಿ ಕೊಡ ಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ/ಕಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ *ರಾಜೇಶ್ವರಿ* ಮತ್ತು ಎನ್ ಆರ್ ಪುರ ಮೋಹಲ್ಲಾ ಕ್ಯಾಂಪಿನ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ *ಮಹಾ ಜಬೀನಾ* ಅವರು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಭಾಜನರಾದರು.

ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ *ಸಿ.ಆರ್. ಜಯಣ್ಣ* ಮತ್ತು ಕರೆ ಕಲ್ಲಹಳ್ಳಿ ಕಿರಿಯ ಪ್ರಾರ್ಥಮಿಕ ಶಾಲೆಯ *ಯೋಗೇಶ್ ಹೆಚ್.ಪಿ* ಅವರು ಜ್ಯೋತಿ ಬಾಪುಲೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದರು.

ಇತ್ತೀಚಿಗೆ ಉತ್ತರ ಕರ್ನಾಟಕದ ವಿಜಯಪುರದಲ್ಲಿ ಎಕ್ಸಲೆಂಟ್ ಪಿಯು ಕಾಲೇಜ್ ಸಭಾಂಗಣದಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು, ರಾಜ್ಯದಾದ್ಯಂತ ಒಟ್ಟು ಐವತ್ತು ಶಿಕ್ಷಕ/ ಶಿಕ್ಷಕಿಯರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ಜನ ಶಿಕ್ಷಕರು ಈ ಗೌರವವನ್ನು ಸ್ವೀಕರಿಸಿದ್ದಾರೆ.

ವಿಜಯಪುರ ಜಿಲ್ಲಾ ಕೆಜೆವಿಎಸ್ ಘಟಕದ ಅಧ್ಯಕ್ಷರಾದ ಜಿ.ಎಸ್.ಕಾಂಬ್ಳೆ ಮತ್ತು ಕಾರ್ಯದರ್ಶಿ ರಮೇಶ್ ನಾಯಕ್ ಹಾಗೂ ಉಪನ್ಯಾಸಕ ಪ್ರೊ. ಶಿವಾನಂದ್ ಕಲ್ಯಾಣಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಈ ಎಲ್ಲ ಪ್ರಶಸ್ತಿ ಪುರಸ್ಕೃತರಿಗೆ ಮತ್ತು ಆಯೋಜಕರಿಗೆ ಚಿಕ್ಕಮಗಳೂರು ಜಿಲ್ಲಾ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಎಂ ಮಂಜುನಾಥಸ್ವಾಮಿ ಈ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ .

About Author

Leave a Reply

Your email address will not be published. Required fields are marked *