AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕನಲ್ಲೂರು ಎಸ್. ಪರಮೇಶ್ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನೇಮಕ*

1 min read

*ಚಿಕ್ಕನಲ್ಲೂರು ಎಸ್. ಪರಮೇಶ್ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನೇಮಕ*

ಕಡೂರು:- ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾಗಿ *ಚಿಕ್ಕ ನಲ್ಲೂರು ಎಸ್. ಪರಮೇಶ್* ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.

ಕನ್ನಡ ನಾಡು ನುಡಿ ಸಾಹಿತ್ಯ ಪ್ರಕಾರವನ್ನು ತಾಲ್ಲೂಕಿನಾ ದ್ಯಂತ ಪ್ರಸಾರ ಮಾಡುವ ಉದ್ದೇಶಹೊಂದಲಾಗಿದ್ದು ಮುಂದಿನ ದಿನಗಳಲ್ಲಿ ತಾಲ್ಲೂಕು ಮತ್ತು ಎಲ್ಲಾ ಹೋಬಳಿಗಳಲ್ಲೂ ಹಾಗೂ ಗ್ರಾಮ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾಧ್ಯಕ್ಷರ ಮಾರ್ಗದರ್ಶನ ದಲ್ಲಿ ಆಯೋಜಿಸುವ ಚಿಂತನೆ ನಡೆಸಲಾಗಿದೆ. ಹಾಗೆಯೇ ತಾಲ್ಲೂಕಿನ ಎಲ್ಲಾ ಹೋಬಳಿ ಗಳಲ್ಲೂ ಸ್ಥಳೀಯ ಆಡಳಿತದ ಸಹಕಾರ ಪಡೆದು ಕನ್ನಡ ಭವನಕ್ಕೆ ನಿವೇಶನ ಪಡೆಯಲಾಗುವುದು. ವಿಶೇಷವಾಗಿ ಸಾಹಿತಿಗಳಿಗಾಗಿ ಕವಿಗೋಷ್ಠಿ, ಕಾವ್ಯ ಕಮ್ಮಟ, ಕಥಾ ಕಮ್ಮಟ, ಕವಿಗಳಿಗೆ ಅವಕಾಶ ಕಲ್ಪಿಸಲಾಗುವುದು.

ಕನ್ನಡ ಭವನದಲ್ಲಿ ಜನವರಿ ತಿಂಗಳಲ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ನೂತನ ಅಧ್ಯಕ್ಷ ಚಿಕ್ಕನಲ್ಲೂರು ಪರಮೇಶ್ ತಿಳಿಸಿದರು

About Author

Leave a Reply

Your email address will not be published. Required fields are marked *