लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪಂಚ ಗ್ಯಾರಂಟಿಗಳ ಪುನರ್ ವಿಮರ್ಶೆಯಾಗಲಿ: ರಂಭಾಪುರಿ ಶ್ರೀ……
ಸಿಂದಗಿ(ವಿಜಯಪುರ): ಪಂಚ ಗ್ಯಾರಂಟಿಗಳಿಗಾಗಿ ಸರ್ಕಾರದಿಂದ ಬಹಳಷ್ಟು ದುಡ್ಡು ಖರ್ಚಾಗುತ್ತಿದೆ. ನಡೆಯಬೇಕಾದ ಅಭಿವೃದ್ದಿ ಕಾರ್ಯ ನಡೆಯುತ್ತಿಲ್ಲ. ವಿರೋಧಪಕ್ಷ ಈ ಗ್ಯಾರಂಟಿಗಳನ್ನು ಪುನರ್ ವಿಮರ್ಶೆ ಮಾಡುವಂತೆ ಒತ್ತಾಯಿಸುತ್ತಿದ್ದರೂ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡುತ್ತಿಲ್ಲ.

ಹೀಗೆ ಕಾಲ ಕಳೆದರೆ ಜನಪ್ರತಿನಿಧಿಗಳಿಗೆ ಕಷ್ಟ ಎದುರಾಗುತ್ತದೆ. ಇದರಿಂದಾಗಿ ಪಶ್ಚಾತಾಪ ಅನುಭವಿಸುವ ಸಂದರ್ಭ ಬಂದರೂ ಬರಬಹುದು ಎಂದು ಬಾಳೆಹೊನ್ನೂರು ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಗುರುವಾರ ಜಾತ್ರಾ ಮಹೋತ್ಸವದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶಾಸಕರಿಗೆ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡುವುದಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ₹ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಅದನ್ನಾದರೂ ತ್ವರಿತಗತಿಯಲ್ಲಿ ಬಿಡುಗಡೆ ಮಾಡುವ ಮೂಲಕ ಆಯಾ ಮತಕ್ಷೇತ್ರಗಳಗಳಲ್ಲಿ ಶಾಸಕರು ಜನರ ಪ್ರೀತಿ ಉಳಿಸಿಕೊಳ್ಳುವಂತೆ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

About Author

Leave a Reply

Your email address will not be published. Required fields are marked *