लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡ್ತಿಚ್ಚು

ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ.
ಚಿಕ್ಕಮ ಗಳೂರು ಜಿಲ್ಲೆಯ ಮೂಡಿ ಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಬಾರಿ ಬೆಂಕಿ ಕಾಣಿಸಿಕೊಂಡಿದೆ.

ಅರಣ್ಯದ ಕಲ್ಲು ಪ್ರದೇಶದಲ್ಲಿ ಹಚ್ಚಿರುವ ಬೆಂಕಿ ಪರಿಸರವನ್ನು ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ.

ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು, ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಕಾಡಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದೀಗ ಶುಕ್ರವಾರ ರಾತ್ರಿ ಮತ್ತೆ ಬೆಂಕಿ ಹೊತ್ತಿಕೊಂಡಿದ್ದು, ಕಿಡಿಗೇಡಿ ಗಳು ಬೆಂಕಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕಾಡ್ಲಿಚ್ಚಿನಿಂದ ಪ್ರಾಣಿ ಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗುವ ಅಪಾಯ ಎದುರಾಗಿದೆ.
ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಮಾರ್ಚ್, ಎಪ್ರಿಲ್
ಹೆಚ್ಚುವರಿ ಬೆಂಕಿ ರೇಖೆ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಬೆಂಕಿಗೆ ಆಹುತಿಯಾಗುವುದನ್ನು ತಪ್ಪಿಸಲು ಸದ್ಯ ಅರಣ್ಯ ಇಲಾಖೆ 315 ಕಿ.ಮೀ. ಪ್ರದೇಶದಲ್ಲಿ ಬೆಂಕಿ ರೇಖೆಗಳನ್ನು ನಿರ್ಮಿಸಿದ್ದು, ಹೆಚ್ಚುವರಿಯಾಗಿ 60 ಕಿ.ಮೀ. ಬೆಂಕಿರೇಖೆಗಳನ್ನು ನಿರ್ಮಿಸಿದೆ. 31 ಫೈರ್ ವಾಚರ್‌ಗಳು ಜಿಲ್ಲೆಯಲ್ಲಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬೀಳದಂತೆ ಹಗಲು ರಾತ್ರಿ ಎನ್ನದೆ ಕಾವಲು ಕಾಯುತ್ತಿದ್ದಾರೆ. ಬೆಂಕಿ ಬೀಳುವುದನ್ನು ತಡೆಗಟ್ಟಲು ಅರಣ್ಯ ಪ್ರದೇಶದಲ್ಲಿ ನಿರ್ಮಿಸಿರುವ ವಾಚ್ ಟವರ್‌ಗಳ ಮೂಲಕ ಫೈರ್ ವಾಚರ್‌ಗಳ 8ತಂಡ ಕಾರ್ಯನಿರ್ವಹಿಸುತ್ತಿದೆ.

ಬೇಸಿಗೆಯಲ್ಲಿ ಕಾಡ್ಲಿಚ್ಚು ಘಟನೆ ಸಂಭವಿಸುತ್ತದೆ. ಆದರೆ ಈ ಬಾರಿ ಕಿಡಿಗೇಡಿಗಳಿಂದಲೇ ಬೆಂಕಿ ಕೊಟ್ಟಿರುವ ಶಂಕೆ ಎದುರಾಗಿದೆ. ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರವಾದಿಗಳು ಆಗ್ರಹಿಸುತ್ತಿದ್ದಾರೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ → ಬಿದಿರುತಳ ಮತ್ತು ಸುತ್ತ ಮುತ್ತಲಿನ ಅರಣ್ಯ ‘ಪ್ರದೇಶದಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಬೆಂಕಿಯಿಂದ ಎಷ್ಟು ಅರಣ್ಯಕ್ಕೆ ಹಾನಿಯಾಗಿದೆ. ನಂದಿಸಲು ಯಾವ ಯಾವ ವಿಧಾನ ಬಳಸಲಾಗಿದೆ, ಎಷ್ಟು ಹಾನಿ ತಡೆಯಲಾಗಿದೆ ಎಂದು ಕೂಡಲೇ ವರದಿ ಒದಗಿಸಬೇಕು. ಹಾಗೂ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಹಾಗೂ ಅಗ್ನಿಶಾಮಕ ಸಾಧನಗಳನ್ನು ಮತ್ತು ಸಿಬ್ಬಂದಿಯನ್ನು ಸನ್ನದ್ದ ಸ್ಥಿತಿಯಲ್ಲಿರುವಂತೆ ನಿರ್ದೇಶಿಸಲು ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ, ಅರಣ್ಯ ಸಚಿವರು ತಿಳಿಸಿದ್ದಾರೆ.

2. ಚಾರ್ಮಾಡಿ ಘಾಟಿಯಲ್ಲಿ ದುಷ್ಕರ್ಮಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು, ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಅರಣ್ಯದ ಸುಮಾರು ಗಿಡಮರಗಳು ಸುಟ್ಟು ಹೋಗಿವೆ. ನಮ್ಮ ತಂಡ ಅಲ್ಲಿಯೇ ಬೀಡು ಬಿಟ್ಟಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.ಎಂದು
ರಮೇಶ್ ಬಾಬು ಡಿಎಫ್‌ಒ ಚಿಕ್ಕಮಗಳೂರು ಇವರು ತಿಳಿಸಿದ್ದಾರೆ.

 

About Author

Leave a Reply

Your email address will not be published. Required fields are marked *