ಬಿಜೆಪಿಯಿಂದ ಹಿರಿಯ ಮುಖಂಡ ಯತ್ನಾಳ್ ಉಚ್ಛಾಟನೆ
1 min read
ಬಿಜೆಪಿಯಿಂದ ಹಿರಿಯ ಮುಖಂಡ ಯತ್ನಾಳ್ ಉಚ್ಛಾಟನೆ…ಬಿಜೆಪಿಯಿಂದ ಹಿರಿಯ ಮುಖಂಡ ಯತ್ನಾಳ್ ಉಚ್ಛಾಟನೆ
ಬಿಜೆಪಿಯಿಂದ ಹಿರಿಯ ಮುಖಂಡ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದೆ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಈ ನಿರ್ಧಾರ ಇಂದು ಕೈಗೊಂಡಿದೆ.