ಕಾರ್ಯಕ್ರಮದ ಉದ್ಘಾಟನೆ ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷರಾದ ಶ್ರೀ ಹಳಸೆ ಶಿವಣ್ಣ…..
1 min read
ಕಾರ್ಯಕ್ರಮದ ಉದ್ಘಾಟನೆ ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷರಾದ ಶ್ರೀ ಹಳಸೆ ಶಿವಣ್ಣ…..
ದಿನಾಂಕ 27.03.2025ನೆಯ ಗುರುವಾರದಂದು ಆಲೂರು ತಾಲೂಕಿನ ಪ್ರಕೃತಿ ಸಣ್ಣ ಕಾಫಿ ಬೆಳೆಗಾರರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ 2023- 25 ನೇ ಸಾಲಿನ 7 ನೇ ವಾರ್ಷಿಕ ಮಹಾಸಭೆಯನ್ನು ಸಂಕಲಾಪುರ ಮಠದ ಆವರಣದಲ್ಲಿ ಆಯೋಜಿಸಲಾಗಿತ್ತು.
ದಿವ್ಯ ಸಾನಿಧ್ಯ ಮತ್ತು ಕಟ್ಟಡದ ಉದ್ಘಾಟನೆಯನ್ನು ಸಂಕಲಾಪುರ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಧರ್ಮರಾಜೇಂದ್ರ ಸ್ವಾಮಿಗಳು ನೆರವೇರಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷರಾದ ಶ್ರೀ ಹಳಸೆ ಶಿವಣ್ಣನವರು ಹಾಗೂ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಶ್ರೀ ಎ ಎಸ್ ಪರಮೇಶ್ ಅವರು
ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜುರವರು , ನೆರವೇರಿಸಿದರು.
ಮುಖ್ಯ ಅತಿಥಿ ಗಳಾಗಿ ಕರ್ನಾಟಕ ಗ್ರೋಯರ್ಸ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಟಿ ಪಿ ಸುರೇಂದ್ರ ರವರು , ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಗೌರವ ಕಾರ್ಯದರ್ಶಿಗಳಾದ ಶ್ರೀ ಕೆ ಬಿ ಲೋಹಿತ್ ರವರು, ಕರ್ನಾಟಕ ಗ್ರೋಯರ್ಸ್ ಫೆಡರೇಶನ್ ನ ನಿರ್ದೇಶಕರಾದ ಶ್ರೀ ಸಿ ಎಸ್ ಮಹೇಶ್ ರವರು
ಹಾಗೂ ದೇವರಾಜು ಅರಸ್ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶ್ರೀ ಎಂ ಡಿ ಕಾಂತರಾಜ್ ರವರು, ಆಲೂರು ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷರಾದ ಶ್ರೀ ರವಿಕುಮಾರ್ ರ ವರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು .
ಕಾರ್ಯಕ್ರಮವು ಪ್ರಕೃತಿ ಸಣ್ಣ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷರಾದ ಶ್ರೀ ಕೆ ಎನ್ ಶಶಿಧರ್ ರವರ ಅದ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರಕೃತಿ ಸಣ್ಣ ಕಾಫಿ ಬೆಳೆಗಾರರ ಸಂಘದ ನೂತನ ಕಾರ್ಯಕಾರಿ ಮಂಡಳಿಗೆ
ಕರ್ನಾಟಕ ಗ್ರೋಯರ್ಸ್ ಫೆಡರೇಶನ್ ವತಿಯಿಂದ ಶುಭ ಕೋರಲಾಯಿತು.