ಮಗಳ ನೋವಿನ ತೊದಲ ನುಡಿಗೆ ಕೊಲೆಗಾರನಾದ ಅಪ್ಪ..
1 min read
ಮಗಳ ನೋವಿನ ತೊದಲ ನುಡಿಗೆ ಕೊಲೆಗಾರನಾದ ಅಪ್ಪ‰
ನಾಡ ಬಂದೂಕಿನಿಂದ ಮೂವರ ಹತ್ಯೆ: ಮಲೆನಾಡಿನಲ್ಲೊಂದು ಅಮಾನುಷ ಕೃತ್ಯ
ಚಿಕ್ಕಮಗಳೂರು : ನಾಡ ಬಂದೂಕಿನಿಂದ ಮೂವರನ್ನು ಹತ್ಯೆ ಮಾಡಿದ ಘಟನೆ ನಡೆದಿದೆ
ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಲಾಗಿದೆ.
ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ನಡೆದಿದೆ
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಘಟನೆ
ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗಲಿದೆ.
ನಾಡ ಬಂದೂಕಿನಿಂದ ಮೂವರನ್ನು ಪೂರ್ಣಪ್ರಜ್ಞಾ ಶಾಲೆಯ ಡ್ರೈವರ್ ರತ್ನಾಕರ್ ಹತ್ಯೆ ಮಾಡಿದ್ದಾನೆ
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸೆಲ್ಫಿ ವಿಡಿಯೋ ಮೂಲಕ ಸಂಸಾರದ ನೋವನ್ನು ಕೊಲೆಗಾರ ತೋಡಿಕೊಂಡಿದ್ದಾನೆ
ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮನನೊಂದು ಈ ಅಮಾನುಷ ಕೃತ್ಯ ಎಸಗಿದ್ದಾನೆ
ಮಗಳ ನೋವಿನ ತೊದಲ ನುಡಿಗೆ ಕೊಲೆಗಾರನಾದ ಅಪ್ಪ…?
ನನ್ನ ಮಗಳ ಖುಷಿ, ಪ್ರೀತಿ, ಸಂತೋಷದ ಮುಂದೆ ಏನೂ ಇಲ್ಲ ಎಂದಿದ್ದಾನೆ.
ಮಗಳಿಗೆ ಶಾಲೆಯಲ್ಲಿ ಮಕ್ಕಳು ನಿಮ್ಮ ಅಮ್ಮ ಎಲ್ಲಿ ಕೇಳ್ತಾರೆ, ಮಗಳು ನನಗೆ ಕೇಳುತ್ತಾಳೆ
ನನಗೆ ಗೊತ್ತಿಲ್ಲದೆ ಮಗಳು ಆಲ್ಬಂನಿಂದ ಫೋಟೋ ತೆಗೆದುಕೊಂಡು ಹೋಗಿ ಶಾಲೆಯಲ್ಲಿ ತೋರಿಸಿದ್ದಾಳೆ ಎಂದು ವಿವರಿಸಿದ್ದಾನೆ.
ತನ್ನ ನಿರ್ಧಾರವನ್ನ ತನ್ನ ಕುಟುಂಬದವರಿಗೆ ಹೇಳಿದ್ದೇನೆ ,ತನ್ನ ಮನೆಯವರು ನನಗೆ ಮೋಸ ಮಾಡಿ ಹೋಗಿ 2 ವರ್ಷ ಆಯ್ತು ಎಂದು ಕೊಲೆ ಬಳಿಕ ಆರೋಪಿ ರತ್ನಾಕರ್ ಸೆಲ್ಫಿ ವಿಡಿಯೋ ಮಾಡಿದ್ದಾನೆ.