लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಉಜಿರೆಯಲ್ಲಿ ಶಾಂತಿ ಭಂಗ; ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು….

1 min read

ಉಜಿರೆಯಲ್ಲಿ ಶಾಂತಿ ಭಂಗ; ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ತಡೆದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಜಿರೆ ನಿವಾಸಿಗಳಾದ ಅನಿಲ್ , ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್‌. ಐ ಮುರಳೀಧರ ನಾಯ್ಕ್ ಕೆ.ಜಿ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.
ಪುನೀತ್ ಕೇರೆಹಳ್ಳಿ ಅವರು ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟುಮಾಡುವ ಸಾಧ್ಯತೆ ಇದ್ದ ಕಾರಣ ದ.ಕ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಹಿತದೃಷ್ಟಿಯಿಂದ ಪುನೀತ್ ಕೇರೆಹಳ್ಳಿಗೆ ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಭಂಧಿಸಿ ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಬಂದಾಗ ಮಹೇಶ್ ಶೆಟ್ಟಿ ತಿಮರೋಡಿಯ ಬೆಂಬಲಿಗರಾದ ಅನಿಲ್ , ಮನೋಜ್ ಕುಂಜರ್ಪ,ಪ್ರಜ್ವಲ್ ಗೌಡ, ಹಾಗೂ ಇತರರು ಗುಂಪು ಸೇರಿಕೊಂಡು ಉಜಿರೆ ಎಸ್.ಡಿ.ಎಂ ಕಾಲೇಜಿನ ಎದುರು ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಅಕ್ರಮ ಸಭೆ ಸೇರಿ ಶಾಂತಿ ಭಂಗ ತರುವ ಉದ್ದೇಶದಿಂದ ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

About Author

Leave a Reply

Your email address will not be published. Required fields are marked *