ಗಾಳಿ ಮಳೆಯ ರಭಸಕ್ಕೆ ಹಾರಿದ ಶಾಲಾ ಮೇಲ್ಚಾವಣಿ
1 min read
ಗಾಳಿ ಮಳೆಯ ರಭಸಕ್ಕೆ ಹಾರಿದ ಶಾಲಾ ಮೇಲ್ಚಾವಣಿ
ದಿನಾಂಕ: 21: 04 : 2025ರ ಸೋಮವಾರ ರಾತ್ರಿ ಬೀಸಿದ ಗಾಳಿ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು. ಬಣಕಲ್ ನ ಶ್ರೀ ವಿದ್ಯಾಭಾರತಿ ಶಾಲಾ ಕೊಠಡಿಯ ಮೇಲ್ಚಾವಣಿ ಹಾರಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಕ್ಷೇತ್ರದ ಸಂಸದರ ಅನುದಾನದಲ್ಲಿ ನಿರ್ಮಾಣಗೊಂಡಿದ್ದ ಹೊಸ ಕೊಠಡಿಯು ನಿರ್ಮಾಣಗೊಂಡು ವರ್ಷ ಕಳೆಯುವ ಮುಂಚೆಯೇ ರಭಸವಾಗಿ ಬೀಸಿದ ಗಾಳಿ ಮಳೆಗೆ ಕೊಠಡಿಯ ಮೇಲ್ಚಾವಣಿ ಹಾರಿದೆ.ಮತ್ತು ಗೋಡೆ ಬಿರುಕು ಬಿಟ್ಟಿದ್ದು ಅಲ್ಲಲ್ಲಿ ಬಿದ್ದು ಹೋಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಿರುವ ಶಾಲೆ ಇದಾಗಿದ್ದು ಕಲಿಕೆಗೆ ಯಾವುದೇ ಸಮಸ್ಯೆಯಾಗದಂತೆ ಶಾಲೆ ಪ್ರಾರಂಭವಾಗುವುದಕ್ಕಿಂತ ಮುಂಚಿತವಾಗಿ ಇದರ ದುರಸ್ತಿ ಮಾಡಿಕೊಡುವಂತೆ ಹಾಗೂ ಇದರೊಂದಿಗೆ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ಈ ವರ್ಷದ ಮಳೆಗಾಲದಲ್ಲಿ ಮಕ್ಕಳ ಸಂಚಾರ ದುಸ್ತರವಾಗಬಹುದು ಹಲವಾರು ಬಾರಿ ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಇನ್ನಾದರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಲಾ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ತಿಳಿಸಿದರು.ಸ್ಥಳದಲ್ಲಿ ಶಾಲಾ ಸಮಿತಿಯ ಕಾರ್ಯದರ್ಶಿ ಬಿ.ಪಿ.ಲಿಂಗಪ್ಪ. ಸಮಿತಿಯ ಸದಸ್ಯರು ಹಾಗೂ ಶಿಕ್ಷಕರು ಇದ್ದರು.