ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಣಚೂರುವಿನೋದ…
1 min read
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ದೇಶದ ನಾಗರಿಕರ ಮೇಲೆ ನಡೆದ ಈ ದಾಳಿ ದುಃಖಕರ ಹಾಗೂ ಅಮಾನವೀಯವಾದುದು.
ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಉಗ್ರರನ್ನು ಮಟ್ಟಹಾಕಲು ಅಗತ್ಯ ಕ್ರಮಕೈಗೊಂಡಿದ್ದು, ಕೇಂದ್ರ ಗೃಹಸಚಿವರಾದ ಶ್ರೀ ಅಮಿತ್ ಶಾ ಅವರು ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ದೇಶದ ಅಮಾಯಕ ಪ್ರಜೆಗಳ ಸಾವಿಗೆ ತಕ್ಕ ಪ್ರತೀಕಾರ ನೀಡಲು ಸರ್ಕಾರ ಹಾಗೂ ಸೇನೆ ಸನ್ನದ್ಧವಾಗಿದೆ.
ಈ ಭಯೋತ್ಪಾದಕ ದಾಳಿಯಲ್ಲಿ ಮೃತರಾಗಿರುವ ಕರ್ನಾಟಕದ ಮಂಜುನಾಥ್ ರಾವ್ ಅವರಿಗೆ ಸಂತಾಪ ಸೂಚಿಸುತ್ತಾ, ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರಾದ ಮಂಜುನಾಥ್ ಅವರ ಪಾರ್ಥೀವ ಶರೀರವನ್ನು ಅವರ ತವರಿಗೆ ರವಾನಿಸುವ ಕಾರ್ಯ ಮತ್ತು ಗಾಯಾಳುಗಳ ಜೊತೆಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.