……ನಿಧನ……
1 min read…….ನಿಧನ……
ಬೇಗಾನೆ ರಾಮಯ್ಯ ಇನ್ನಿಲ್ಲ.
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವರೂ ಆಗಿದ್ದ ಬೇಗಾನೆ ರಾಮಯ್ಯ ಅವರು ನಿನ್ನೆ ನಿಧನರಾಗಿದ್ದಾರೆ.
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ತಂದೆಯವರಾದ ಬೇಗಾನೆ ರಾಮಯ್ಯ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸುಮಾರು 1:45ಕ್ಕೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1978ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬೇಗಾನೆ ರಾಮಯ್ಯ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮಯ್ಯ, 1972 ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದರು.
ಶೃಂಗೇರಿ ಕ್ಷೇತ್ರದ ಶಾಸಕರಾಗಿ ಗ್ರಾಮೀಣ ಅಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ ರಾಮಯ್ಯ ಶೃಂಗೇರಿ ಕ್ಷೇತ್ರ ಕಂಡ ಅಪರೂಪದ ರಾಜಕಾರಣಿ. ಕೆ.ಎನ್ ವೀರಪ್ಪ, ಗೌಡರ ಎದುರಿಗೆ ಪ್ರಚಂಡ ಮತಗಳಿಂದ ಗೆದ್ದ ರಾಮಯ್ಯ ಗುಂಡೂರಾವ್ ಸಂಪುಟದಲ್ಲಿ ಸಚಿವರಾಗಿದ್ದರು. ಮಲೆನಾಡು ಭಾಗದಲ್ಲಿ ಬೋರವೆಲ್ ರಾಮಯ್ಯ ಎಂದೇ ಜನಪ್ರಿಯರಾಗಿದ್ದರು.
ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.