ಮೇ.8ಕ್ಕೆ ಕಂಚಿನ ಪುತ್ಥಳಿ ಲೋಕಾರ್ಪಣೆ……
1 min read
ಮೇ.8ಕ್ಕೆ ಕಂಚಿನ ಪುತ್ಥಳಿ ಲೋಕಾರ್ಪಣೆ
ಚಿಕ್ಕಮಗಳೂರು: ಶ್ರೀ ಕ್ಷೇತ್ರ ಹೊರನಾಡಿನ
ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದಿವಂಗತ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ಮತ್ತು ದಿ. ನರಸಮ್ಮ ವೆಂಕಟಸುಬ್ಬಾ ಜೋಯಿಸ್ ದಂಪತಿಗಳವರ ಕಂಚಿನ ಪುತ್ಥಳಿ ಅನಾವರಣ, ಶ್ರೀ ಅನ್ನಪೂರ್ಣ ಪಾದಸೇವಾ ಧುರಂದರ ಪುಸ್ತಕ ಲೋಕಾರ್ಪಣೆ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಸೌಲತ್ತುಗಳ ವಿತರಣಾ ಕಾರ್ಯಕ್ರಮ ಮೇ.8 ರಂದು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ರೀ ಕ್ಷೇತ್ರ ಹೊರನಾಡು ಟ್ರಸ್ಟಿ ಗಿರಿಜಾಶಂಕರ ಜೋಷಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಧರ್ಮಕರ್ತ ಜಿ, ಭೀಮೇಶ್ವರ ಜೋಷಿ ವಹಿಸುವರು. ಪುತ್ಥಳಿಯನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಅವರು ಅನಾವರಣಗೊಳಿಸುವರು. ಹರಿಹರ ಪೀಠದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಕಾವೆತ್ ಅವರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ ಮತ್ತು ಅರ್ಚಕ ನಿವಾಸದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆಂದು ಹೇಳಿದರು.
ಅಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ದೇವರ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮಧ್ಯಾಹ್ನದ ನಂತರ ಎಂದಿನಂತೆ ದೇವರ ದರ್ಶನ ಮತ್ತು ಪ್ರಸಾದ ಮುಂದುವರೆಯುತ್ತದೆ. ಈ ಬದಲಾವಣೆಗೆ ಕ್ಷೇತ್ರಕ್ಕೆ ಬರುವ ಭಕ್ತರು ಸಹಕರಿಸುವಂತೆ ವಿನಂತಿಸಿದ ಅವರು, ಹೆಚ್ಚಿನ ಮಾಹಿತಿಗೆ 8217629979 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಿದ್ದಾರೆ..