ಕಾಫಿ ಬೆಳೆಗಾರರ ಗಮನಕ್ಕೆ:…..
1 min read
ಕಾಫಿ ಬೆಳೆಗಾರರ ಗಮನಕ್ಕೆ:
ತೋಟ ಕಾರ್ಮಿಕರ ಕೆಲಸದ ಅವಧಿ ನಿಗದಿಗೊಳಿಸಿ ಡಿಸಿ ಆದೇಶ..
ಅರೇಹಳ್ಳಿ, ಬಿಕ್ಕೋಡು ಮತ್ತು ಕಸಬಾ ಹೋಬಳಿಗಳ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ನಿಯಮ ಅನ್ವಯವಾಗಲಿದೆ.
ಆರು ಮಂದಿ ಸಾವನ್ನಪ್ಪಿದ್ದು, ಬೇಲೂರು ತಾಲೂಕಿನಲ್ಲಿಯೇ ಕಳೆದ ಐದು ತಿಂಗಳಲ್ಲಿ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಬಿಕ್ಕೋಡು, ಅರೇಹಳ್ಳಿ ಮತ್ತು ಕಸಬಾ ಹೋಬಳಿಗಳಲ್ಲಿ ಈ ಘಟನೆಗಳು ಸಂಭವಿಸಿವೆ.
ಈ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಬೆಳಿಗ್ಗೆ 8 ಗಂಟೆಯವರೆಗೆ ಮತ್ತು ಸಂಜೆ 6 ಗಂಟೆಯ ನಂತರ ಆನೆಗಳ ಸಂಚಾರ ಹೆಚ್ಚಾಗಿದೆ. ಹೀಗಾಗಿ ಆನೆ ಓಡಾಟದ ಸಮಯದಲ್ಲಿ ಜನರು ದಾಳಿಗೆ ಬಲಿಯಾಗುವುದನ್ನು ತಪ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಜನರ ಸುರಕ್ಷತೆಗಾಗಿ ಜಿಲ್ಲಾಧಿಕಾರಿಯ ಈ ಹೊಸ ಮಾರ್ಗಸೂಚಿ ತಕ್ಷಣದಿಂದ ಜಾರಿಗೆ ಬಂದಿದೆ.