ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧ ಪುನರಾಯ್ಕೆ….
1 min read
ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧ ಪುನರಾಯ್ಕೆ
ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಅವಿರೋಧವಾಗಿ ಪುನಾಯ್ಕೆಯಾಗಿದ್ದಾರೆ. ಒಟ್ಟಾರೆ 6ನೇ ಬಾರಿಗೆ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಚುನಾವಣಾಧಿಕಾರಿ ಪವನ್ ಕುಮಾರ್ ಎಸ್. ಅವರು ಚಿತ್ರಕಲಾ ಪರಿಷತ್ ಗೆ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಹುದ್ದೆಗಳಿಗೆ ಜೂ.29ರಂದು ಚುನಾವಣೆ ನಿಗದಿಯಾಗಿತ್ತು. ನಾಮಪತ್ರ ವಾಪಸಾತಿಯ ಬಳಿಕ ಆಯ್ಕೆಯಾಗಬೇಕಾದ ಸ್ಥಾನಗಳಿಗೆ ಸಮಾನವಾಗಿ ಅಭ್ಯರ್ಥಿಗಳು
ಉಳಿದಿರುವುದರಿಂದ ಅವಿರೋಧ ಆಯ್ಕೆ ಘೋಷಿಸಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್, ಉಪಾಧ್ಯಕ್ಷರಾಗಿ ಪ್ರಭಾಕರ್ ಟಿ ಹಾಗೂ ಪ್ರೊ.ಅಪ್ಪಾಜಯ್ಯ ಕೆ.ಎಸ್., ಖಜಾಂಚಿಯಾಗಿ ಡಾ.ಎನ್.ಲಕ್ಷ್ಮೀಪತಿ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್.ಶಶಿಧರ್, ಜಂಟಿ ಕಾರ್ಯದರ್ಶಿಯಾಗಿ ತಾರಕೇಶ್ವರಿ ಟಿ.ವಿ., ಸುಬ್ರಮಣ್ಯ ಕುಕ್ಕೆ, ಬಿ.ಎಲ್.ಶ್ರತೀನಿವಾಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಟಿ.ಚಂದ್ರಶೇಖರ್, ಬಿ.ವೈ.ವಿನೋದ, ರಮಾ ಶರ್ಮಾ, ಆಮ್ಮಿತ ವಿಮಲನಾಥನ್, ಡಾ.ಲಕ್ಷ್ಮೀಪತಿ ಜಿ, ಬಾಳಾಸಾಬ ಸದಲಗ ಹಾಗು ಸಿ.ಪಿ. ಉಷಾರಾಣಿ…