लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಿಬಿಎಂಪಿಯ ಕಸ ನಿರ್ವಹಣೆ ಸೆಸ್ ಹಾಗೂ ಶುಲ್ಕ ಹೆಚ್ಚಳದ ವಿರುದ್ದ ಆಪ್ ನಿಂದ ಕರ ನಿರಾಕರಣೆ ಚಳುವಳಿ #avintvcom

1 min read
Featured Video Play Icon

ಬಿಬಿಎಂಪಿಯ ಕಸ ನಿರ್ವಹಣೆ ಸೆಸ್‌ ಹಾಗೂ ಶುಲ್ಕ ಹೆಚ್ಚಳದ ವಿರುದ್ದ ಆಪ್‌ ನಿಂದ ಕರ ನಿರಾಕರಣೆ ಚಳುವಳಿ

  • ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ ಮತ್ತು ಬಳಕೆದಾರರ ಶುಲ್ಕ ಸಂಗ್ರಹ ಹೆಚ್ಚಳ ಆದೇಶ ಹಿಂಪಡಯುವಂತೆ ಆಮ್‌ ಆದ್ಮಿ ಪಕ್ಷದಿಂದ ಆಗ್ರಹ
  • ಇಲ್ಲದಿದ್ದಲ್ಲಿ 2 ನೇ ಡಿಸೆಂಬರ್ 2020 ಕ್ಕೆ ಕರ ನಿರಾಕರಣೆ ಚಳವಳಿ

 

ಬೆಂಗಳೂರು ನವಂಬರ್‌ 28: ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌)ವನ್ನು ರೂ 200 ರಿಂದ 600 ಕ್ಕೆ ಹೆಚ್ಚಳ ಮಾಡಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ವಿರೋಧಿಸಿ ಆಮ್‌ಆದ್ಮಿ ಪಕ್ಷ ಇದೇ ಡಿಸೆಂಬರ್ 2 ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

 

ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಎಂದು ಅತ್ತೂರು ವಾರ್ಡ್‌ ಅಧ್ಯಕ್ಷೆ ಸುಹಾಸಿನಿ ಫಣಿರಾಜ್‌  ಮಾತನಾಡಿ ನಾಚಿಕೆಗೆಟ್ಟ ಸರ್ಕಾರ ಬಡವರನ್ನು ಸುಲಿದು ತಿನ್ನಲು ಹೊರಟಿದೆ, ವಿದ್ಯುತ್ ಬಿಲ್ ಹೆಚ್ಚಳ ಮಾಡಿದೆ, ನಂತರ ನೀರಿನ ಬಿಲ್ ಹೆಚ್ಚಳಕ್ಕೆ ಕೈ ಹಾಕಿದೆ, ಈಗ ಕಸ ಸಂಗ್ರಹ ಶುಲ್ಕ ಹೆಚ್ಚಳ ಮಾಡಲು ಹೊರಟಿರುವ ಈ ಜನ ವಿರೋಧಿ ನಡೆಯನ್ನು ಸಹಿಸುವುದಿಲ್ಲ ಎಂದರು.

 

ಈ ಕೂಡಲೇ ಈ ಆದೇಶವನ್ನು ಬಿಬಿಎಂಪಿ ಹಿಂಪಡೆಯದೇ ಹೋದರೆ ಬಳಕೆದಾರರ ಶುಲ್ಕ ಕಟ್ಟದೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಬೆಂಗಳೂರು ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್.ಎಸ್.ವಿ ಎಚ್ಚರಿಕೆ ನೀಡಿದರು.

 

ಈಗಾಗಲೇ ಜನರಿಂದ 45 ಕೋಟಿಯಷ್ಟು ಕಸದ ನಿರ್ವಹಣೆಗೆ ಎಂದು ಸೆಸ್ ಸಂಗ್ರಹಿಸಲಾಗುತ್ತಿದೆ. ಬೆಂಗಳೂರಿಗಿಂತಲೂ ದೊಡ್ಡ ವಿಸ್ತೀರ್ಣದ ದೆಹಲಿ ನಗರದ ಕಸ ನಿರ್ವಹಣೆಗೆ ಅಲ್ಲಿನ ಆಮ್ ಆದ್ಮಿ ಪಕ್ಷದ ಸರ್ಕಾರ ವಾರ್ಷಿಕ ₹ 250 ಕೋಟಿ ಖರ್ಚು ಮಾಡುತ್ತಿದೆ. ಆದರೆ ಬಿಬಿಎಂಪಿ ಮಾತ್ರ ವರ್ಷಕ್ಕೆ ₹1200 ಕೋಟಿಗೂ ಅಧಿಕ ವೆಚ್ಚ ಅಂದರೆ ವಾರ್ಡ್ ಒಂದಕ್ಕೆ 6 ಕೋಟಿಯಷ್ಟು ಖರ್ಚು ಏಕೆ  ಎಂದು ಮೊದಲು ಬಿಬಿಎಂಪಿ ಉತ್ತರಿಸಬೇಕು ಎಂದು ಹೇಳಿದರು.

ಕಸದಿಂದ ಅನೇಕ ರಾಜ್ಯಗಳು, ಆದಾಯವನ್ನು ಪಡೆಯುತ್ತಿವೆ. ಇಂತಹ ಅವಕಾಶಗಳನ್ನು ಬೆಂಗಳೂರಿನಲ್ಲೂ ಜಾರಿಗೆ ತರುವುದು ಬಿಟ್ಟು ಜನರ ಮೇಲೆ ಏಕೆ ಮತ್ತಷ್ಟು ಹೊರೆ ಹಾಕುತ್ತಿದ್ದೀರಿ ಎಂದು ಪ್ರಶ್ನಿಸಿದರು. ಮತ್ತೊಮ್ಮೆ‌ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಿಂದ‌ ಅಭಿಪ್ರಾಯ ಪಡೆದು ಮುಂದುವರೆಯಬೇಕಾಗಿ ಆಮ್‌ಆದ್ಮಿ ಪಕ್ಷ ಆಗ್ರಹಿಸುತ್ತದೆ ಎಂದರು.

ಗೋಷ್ಠಿಯಲ್ಲಿ ಅತ್ತೂರು ವಾರ್ಡ್ ಅಧ್ಯಕ್ಷೆ ಸುಹಾಸಿನಿ ಫಣಿರಾಜ್, ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author