लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಉದ್ಯಮಿ ನಾಗಣ್ಣ ನೇತೃತ್ವದಲ್ಲಿ ಅಮ್ ಆದ್ಮಿ ಪಕ್ಷಕ್ಕೆ ಬೃಹತ್ ಸೇರ್ಪಡೆ #avintvcom

1 min read

ಜೆಡಿಎಸ್‌ ಮಾಜಿ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಉದ್ಯಮಿ ನಾಗಣ್ಣ ನೇತೃತ್ವದಲ್ಲಿ ಅಮ್‌ ಆದ್ಮಿ ಪಕ್ಷಕ್ಕೆ ಬೃಹತ್‌ ಸೇರ್ಪಡೆ

-ಬದಲಾವಣೆಯ ಹೊಸ ಪರ್ವಕ್ಕೆ ಮುನ್ನಡಿ – ಆಮ್‌ ಆದ್ಮಿ ಪಕ್ಷದತ್ತ ಹೆಚ್ಚಿದ ಜನರ ಒಲವು

ಬೆಂಗಳೂರು ನವಂಬರ್‌ 30: ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷ ತಂದಿರುವ ಕ್ರಾಂತಿಕಾರಕ ಬದಲಾವಣೆಗಳನ್ನು ಬೆಂಗಳೂರಿಗೂ ತರುವ ಒತ್ತಾಸೆಯನ್ನು ಇಟ್ಟುಕೊಂಡು ಅನೇಕ ಕ್ಷೇತ್ರಗಳ ಪ್ರಮುಖರು, ವಿವಿಧ ಪಕ್ಷಗಳ ನಾಯಕರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ರಾಜ್ಯ ಉಪಾಧ್ಯಕ್ಷ ಸುರೇಶ್‌ ರಾಥೋಡ್‌, ಉಸ್ತುವಾರಿ ರೋಮಿ ಬಾಟಿ ಪಕ್ಷಕ್ಕೆ ಬರಮಾಡಿಕೊಂಡರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ (ಜಾತ್ಯಾತೀತ ಜನತಾದಳ) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಉದ್ಯಮಿ ನಾಗಣ್ಣ ಅವರ ನೇತೃತ್ವದಲ್ಲಿ ಪ್ರಸಿದ್ದ ಲೆಕ್ಕಪರಿಶೋಧಕ ಮುರೂರು ರಾಜೇಂದ್ರ ಕುಮಾರ್‌ ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು.

ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಮಾತನಾಡಿ, ಆಮ್‌ ಆದ್ಮಿ ಪಕ್ಷ ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರದಲ್ಲಿ ಅತ್ಯುತ್ತಮ ವಾದ ಬೆಂಬಲಗಳಿಸುತ್ತಿದೆ. ನಾಗಣ್ಣ ಅವರಂತಹ ವ್ಯಕ್ತಿಗಳು ಪಕ್ಷಕ್ಕೆ ಸೇರ್ಪಡೆ ಆಗುವ ಮೂಲಕ ಭ್ರಷ್ಟಾಚಾರದ ವಿರುದ್ದ ದ್ವನಿ ಎತ್ತು ಪಕ್ಷಕ್ಕೆ ಇನ್ನಷ್ಟು ಬಲವನ್ನು ತುಂಬಿದ್ದಾರೆ ಎಂದು ಹೇಳಿದರು.

ಬೆಂಗಳೂರು ಘಟಕ ಆಮ್‌ ಆದ್ಮಿ ಪಕ್ಷದ ಮೋಹನ್‌ ದಾಸರಿ ಮಾತನಾಡಿ, 198 ವಾರ್ಡ್‌ಗಳಲ್ಲೂ ಆಪ್‌ ಸ್ಪರ್ಧೆಗೆ ಇಳಿಯಲಿದೆ. ಕೆ.ಬಿ ನಾಗಣ್ಣ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ. ಎಂದರು.

ಕೆ.ಬಿ ನಾಗಣ್ಣ ಮಾತನಾಡಿ, ಮೊದಲಿನಿಂದಲೂ ನಾವು ಭ್ರಷ್ಟಚಾರದ ವಿರುದ್ದ ಹೋರಾಡುತ್ತಾ ಬಂದಿದ್ದೇನೆ. ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಮೂಲಕ ನಾವು ಮುಂದಿನ ಪೀಳಿಗೆಗೆ ಯಾವುದಾದರೂ ಕೊಡುಗೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ. ಒಬ್ಬ ವ್ಯಕ್ತಿ ರಾಜಕೀಯ ಅನುಭವ ಇಲ್ಲದೆ ರಾಜಕೀಯ ಪಕ್ಷದ ಸೃಷ್ಟಿ ಮಾಡಿ ಇಂತಹ ವ್ಯವಸ್ಥೆಯ ಬದಲಾವಣೆ ಮಾಢಿದ್ದಾರೆ ಅರವಿಂದ ಕೇಜ್ರಿವಾಲ್‌. ಇಂತಹ ಆಡಳಿತ ದೇಶದ ಎಲ್ಲಡೆ ಸಾಧ್ಯವಿದ್ದು, ಬದಲಾವಣೆಯನ್ನು ತರುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆ ಆಗಿದ್ದೇನೆ ಎಂದು ಹೇಳಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

 

About Author