लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಯನ್ನು ಪಡೆಯಬೇಕು ಎಂದು ನಗರದ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ #avintvcom

1 min read
Featured Video Play Icon

ಚಿಕೋಡಿ

ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಯನ್ನು ಹಿಂದೆ ಪಡೆಯಬೇಕು ಎಂದು ಆಗ್ರಹಿಸಿ

ನಗರದ ಚನ್ನಮ್ಮ ವೃತ್ತದ ಬಳಿ ಜಮಾಯಿದ ಪ್ರತಿಭಟನಾಕಾರರು

ದೇಶದ ಬೆನ್ನೆಲುಬು ರೈತ ಎನ್ನುತ್ತಾರೆ ಆದರೆ ರೈತರಿಗೆ ಅನ್ಯಾಯವಾದರೆ ಯಾರು ಕೂಡ ಇರುವುದಿಲ್ಲ ಇದು ನಮ್ಮ ದುರಂತ ಕಳೆದ ಹಲವಾರು ದಿನಗಳಿಂದ ಕೊರೆಯುವ ಚಳಿಯಲ್ಲಿ ದೆಹಲಿಯಲ್ಲಿ ನಿರಂತರ ಪ್ರತಿಭಟನೆ ಹೋರಾಟಗಳು ನಡೆಯುತ್ತಿದ್ದರೂ ಕೇಂದ್ರ ಸರಕಾರ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ರೈತರಿಗೆ ಮಾರಕವಾಗುವ ಕಾಯ್ದೆಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಿ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕಾಯ್ದೆಗಳು ಮಾಡಬೇಕೆ ಹೊರತಾಗಿ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಕೇಂದ್ರ ಸರ್ಕಾರಕ್ಕೆ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆಂದರೆ ಕೂಡಲೇ ಕಾಯ್ದೆಯನ್ನು ಹಿಂದೆ ಪಡೆಯಬೇಕು ಎಂದು ಮನವಿ ಮಾಡಿದರು

ಮೂರು ಮಸೂದೆಗಳನ್ನು ವಾಪಸು ತೆಗೆದು ಕೊಳ್ಳಬೇಕು

ಬೆಳಗಾವಿಯಲ್ಲಿ ಬಂದಗೆ ವ್ಯಾಪಾರಸ್ಥರ ಬೆಂಬಲ

ನಗರದ ಪ್ರಮುಖ ಮಾರುಕಟ್ಟೆ ಯಲ್ಲಿ ಅಂಗಡಿಗಳು ಬಂದ್

ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಿ ಬೆಂಬಲ

ಎಲ್ಲೆಡೆ ಬಿಗಿ ಬಂದುಬಸ್ತ್ ಪೋಲಿಸ್ ಇಲಾಖೆ

ಇದೇ ವೇಳೆ ಮಾತನಾಡಿದ ರೈತ ಮುಖಂಡ ಮಹದೇವ ಮಡಿವಾಳರ ವಿದ್ಯುತ್ ಖಾಸಗೀರಣ, ಎಪಿಎಮ್‍ಸಿ ತಿದ್ದುಪಡಿ ಕಾಯಿದೆ, ಭೂಸುಧಾರಣೆ ತಿದ್ದುಪಡಿ ಕಾಯಿದೆಗಳು ಅವೈಜ್ಞಾನಿಕವಾಗಿವೆ. ರೈತರ ಪಾಲಿಗೆ ಮರಣ ಶಾಸನ ಬರೆಯುತ್ತಿರುವ ಸರ್ಕಾರಗಳು ರೈತರನ್ನು ಭಾರತದ ಬೆನ್ನೆಲುಬು ಎಂದು ಬಾಯಿ ಮಾತಿಗೆ ಹೇಳುತ್ತಿದ್ದು ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಯಾವಕಾರಣಕ್ಕೂ ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ಈ ವೇಳೆ ಚನ್ನಗೌಡ ಇಮಗೌಡರ, ಪಿಂಟು ಕಬಾಡಗಿ, ಅಡಿವೆಪ್ಪ ಆಜೂರ, ಭರಮಾ ಅಡಳ್ಳಿ, ಈರಪ್ಪಾ ಅಂಗಡಿ, ರಮೇಶ್ ಮಡಿವಾಳ, ರವೀಂದ್ರ ಅವಟಿ, ರುದ್ರಪ್ಪಾ ಕಂಬಾರ ಸೇರಿ ಇನ್ನಿತರರು ಉಪಸ್ಥಿತರಿದ್ದರು.

ಈ ವೇಳೆ ಗದಗ ದಿಂದ ಆಗಮಿಸಿದ್ದ ಗವಿಸಿದ್ದಯ್ಯ ಹಿರೇಮಠ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಳು ರೈತರು ಮತ್ತು ಜನಪರವಾಗಿಲ್ಲ. ಇಂದು ಅಥಣಿಯಲ್ಲಿ ನಡೆಯುತ್ತಿರುವ ಬಾರುಕೋಲು ಚಳುವಳಿ ಕೇವಲ ಸಾಂಕೇತಿಕವಾಗಿ ನಡೆಯುತ್ತಿರುವ ಹೋರಾಟ ವಾಗಿದ್ದು ರೈತ ವಿರೋಧಿ ನೀತಿಗಳನ್ನು ಸರ್ಕಾರ ಕೂಡಲೇ ಹಿಂಪಡೆಯುವ ಮೂಲಕ ರೈತರ ಹಿತರಕ್ಷಣೆಗೆ ಮುಂದಾಗದಿದ್ದರೆ ಉಗ್ರ ಹೋರಾಟ ಮಾಡುವದಾಗಿ

ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಸಮಾವೇಶಗೊಂಡ ರೈತರಿಗೆ ಜಯಕರ್ನಾಟಕ ಸಂಘಟನೆ, ಕರ್ನಾಟಕ ವಿಜಯಸೇನೆ, ಸುವರ್ಣ ಕರ್ನಾಟಕ ಜನಸೇವಾ ಸಂಘ, ಗುತ್ತಿಗೆ ಪೌರ ಕಾರ್ಮಿಕ ಸಂಘ, ದಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ, ಪಾಪುಲರ್ ಪ್ರಂಟ್ ಆಫ್ ಇಂಡಿಯಾ, ಕರವೇ ನಾರಾಯಣ ಗೌಡ ಬಣ, ಬಹುಜನ ಸಮಾಜ ಪಾರ್ಟಿ ಸೇರಿದಂತೆ ಹಲವು ಸಂಘಟನೆಗಳು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ರೈತರ ಹೋರಾಟವನ್ನು ಬೆಂಬಲಿಸಿದವು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿತೋಧಿ ನೀತಿ ಖಂಡಿಸಿ ಹಾಗೂ ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ರೈತ ಮುಖಂಡ ಮಹದೇವ ಮಡಿವಾಳರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಬಂಧಪಟ್ಟ ಅಧಿಕಾರಿಗಳು ತಾಲೂಕ್ ಆಡಳಿತ ಜಿಲ್ಲಾಡಳಿತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಪ್ರಧಾನಮಂತ್ರಿಗಳು ರಾಜ್ಯಪಾಲರು ರಾಷ್ಟ್ರಪತಿಗಳು ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತಾರೆ ಅಥವಾ ನಿಗುಡ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author