ಗಡಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಡಾ. ಸಿ ಸೋಮಶೇಖರ ವಿಭೂಷಣ ರಾಜ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು#avintvcom
1 min read
ಸಮಾಜ ಸೇವೆ ಜೀವನದ ಉಸಿರಾಗಬೇಕು : ಗಡಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಡಾ. ಸಿ ಸೋಮಶೇಖರ ಅಭಿಮತ ಕಾಯಕ ವಿಭೂಷಣ ರಾಜ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು
ಸುದ್ಧಿ :
ಸಾಮಾಜಿಕ ಶ್ರಮದಾನವಾದಾಗ ಮಾತ್ರ ವ್ಯಕ್ತಿಯನ್ನು ಗುರುತಿಸಿ ಗೌರವಿಸುವ ಕಾರ್ಯ ಎಲ್ಲೆಡೆಗೂ ನಡೆಯುತ್ತದೆ ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ ಅವರು ಇಂದಿಲ್ಲಿ ಹೇಳಿದರು.
ಇಲ್ಲಿನ ಸ್ವಗೃಹದಲ್ಲಿ ಚಮಕೇರಿಯ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕ್ರತಿಕ ಟ್ರಸ್ಟ್ ಆಯೋಜಿಸಿದ್ದ ವೇದಿಕೆಯಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾಗಿ, ಕಾಯಕವಿಭೂಷಣ ರಾಜ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಪ್ರಶಸ್ತಿಗಳು ಮನುಷ್ಯನ ಮೌಲ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತವೆ. ಸಾಧನೆ ಸಿದ್ಧಿಸಿದಾಗ ದೊರೆಯುವಂತ ಸನ್ಮಾನಗಳು ಮೌಲ್ಯ ಯುತವಾದುದು. ನನಗೆ ಸರಕಾರ ನೀಡಿರುವ ಈ ಪ್ರಾಧಿಕಾರದ ಹುದ್ದೆಗೆ ಮೌಲ್ಯಯುತವಾದಂತ ನ್ಯಾಯವನ್ನು ಒದಗಿಸುವ ಪ್ರಾಮಾಣಿಕ ಕೆಲಸವನ್ನು ಮಾಡುತ್ತೇನೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಬಕಾರಿ ಇಲಾಖೆಯ ಸಹಾಯಕ ಆಯುಕ್ತ ಡಾ. ಬಸಲಿಂಗಯ್ಯ ಹಿರೇಮಠ ಮಾತನಾಡಿ ಪ್ರತಿಯೊಬ್ಬ ಪ್ರಜೆಯೂ ದೇಶ ನನಗೇನು ಕೊಟ್ಟಿತು ಎನ್ನುವ ಬದಲು ದೇಶಕ್ಕಾಗಿ ನಾನೇನು ಕೊಟ್ಟೆ ಎನ್ನುವುದನ್ನು ಸ್ಮರಿಸಿಕೊಂಡಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಸಂಸ್ಥೆ ಅಥವಾ ಕುಟುಂಬದಿಂದ ಪಡೆದ ಉತ್ತಮ ಸಂಸ್ಕಾರ, ಸಂಸ್ಕೃತಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಬೆಳವಣಿಗೆ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ವಿರೇಂದ್ರ ಕಾಗವಾಡೆ, ಪ್ರಶಾಂತ ಬಮ್ಮಣ್ಣವರ, ಮಾತೋಶ್ರೀ ಸುಕನ್ಯಾ ಬಸಲಿಂಗಯ್ಯ ಹಿರೇಮಠ, ಟ್ರಸ್ಟ್ ಅಧ್ಯಕ್ಷ ಮಹಾದೇವ ಬಿರಾದಾರ ಸೇರಿದಂತೆ ಇತರರು ಇದ್ದರು.