ಬಿಬಿಎಂಪಿ ಅಧಿಕಾರ ಕಸಿದು ಸರ್ಕಾರವೇ ನೇರವಾಗಿ ಲೂಟಿ ಹೊಡೆಯಲು ದಾರಿ ಮಾಡಿಕೊಡುವ ನೂತನ #avintvcom
1 min read
ಬಿಬಿಎಂಪಿ ಅಧಿಕಾರ ಕಸಿದು ಸರ್ಕಾರವೇ ನೇರವಾಗಿ ಲೂಟಿ ಹೊಡೆಯಲು ದಾರಿ ಮಾಡಿಕೊಡುವ ನೂತನ ವಿಧೇಯಕ: ಆಮ್ ಆದ್ಮಿ ಪಕ್ಷ ಆಕ್ರೋಶ
ಬೆಂಗಳೂರು ಡಿಸೆಂಬರ್ 11: ಸರ್ಕಾರ ತಂದಿರುವ ಬಿಬಿಎಂಪಿ ನೂತನ ವಿದೇಯಕ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಅಡಗಿಸುವ ಹಾಗೂ ನಿಧಾನಕ್ಕೆ ಕಸಿಯುವ ಹುನ್ನಾರವಾಗಿದೆ. ಅನೇಕ ದೇಶಗಳು ತಮ್ಮ ಒಟ್ಟು ಬಜೆಟ್ಟಿನ ಶೇ 27 ರಷ್ಟು ಹಣವನ್ನು ಮೀಸಲಿಟ್ಟು ಸ್ಥಳೀಯ ಸಂಸ್ಥೆಗಳ ಮೂಲಕ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತವೆ, ಆದರೆ ಈ ದೂರ್ತ ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನೇ ಕಿತ್ತುಕೊಂಡು ಇಲ್ಲೂ ವ್ಯಾಪಕವಾದ ಲೂಟಿಗೆ ದಾರಿ ಮಾಡಿಕೊಟ್ಟಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಹೇಳಿದರು.
ಶುಕ್ರವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಸದಸ್ಯರ ಆಸ್ತಿ ವಿವರವನ್ನು ಮೇಯರ್ಗೆ ಸಲ್ಲಿಸಬೇಕು ಎಂದು ಹೇಳಿ ಸದಸ್ಯರನ್ನು ರಕ್ಷಿಸುವ ಹುನ್ನಾರ ಅಡಗಿದೆ. ಲೋಕಾಯುಕ್ತ, ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಆಸ್ತಿ ವಿವರವನ್ನು ಪ್ರತಿ ವರ್ಷ ಕಡ್ಡಾಯವಾಗಿ ಸಲ್ಲಿಸದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎನ್ನುವ ಅಂಶವನ್ನು ಸೇರಿಸಬೇಕು. ಕಳೆದ ಬಾರಿ ಸುಮಾರು 120 ಕ್ಕೂ ಹೆಚ್ಚು ಸದಸ್ಯರು ಆಸ್ತಿ ವಿವರ ಸಲ್ಲಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಶಾಸಕರ, ಸಂಸದರ ಚೇಲಾಗಳು, ಪಕ್ಷದಗಳಲ್ಲಿ ಇರುವ ಅತೃಪ್ತರನ್ನು ತೃಪ್ತಿ ಪಡಿಸಲು 15 ವಲಯಗಳಾಗಿ ವಿಂಗಡಿಸಿ ವ್ಯಾಪಕ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವಲಯ ಉಸ್ತುವಾರಿಗಳಿಗೆ ಪ್ರತ್ಯೇಕ ಕಚೇರಿ, ಸಿಬ್ಬಂದಿ ಎಂದು ಹೇಳಿ ಜನರ ದುಡ್ಡನ್ನ ವ್ಯರ್ಥವಾಗಿ ಖರ್ಚು ಮಾಡಲು ಸರ್ಕಾರ ಹೊರಟಿದೆ. ಆದ ಕಾರಣ ಈ ವಲಯಗಳನ್ನು 8 ಕ್ಕೆ ಇಳಿಸಬೇಕು ಎಂದರು.