ಅನುಷ್ಠಾನದ ವಿರುದ್ದ ಇದೆ ತಿಂಗಳ 15.ರಂದು ಹೋರಾಟವನ್ನು ಪಕ್ಷ ಬೇದ ಮರೆತು ಎಲ್ಲರೂ ಬೆಂಬಲಿಸ ಬೇಕು.#avintvcom
1 min read
ಕಸ್ತೂರಿರಂಗನ್ ವರದಿ ಅನುಷ್ಠಾನದ ವಿರುದ್ದ ಇದೆ ತಿಂಗಳ 15.ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಹೋರಾಟವನ್ನು ಪಕ್ಷ ಬೇದ ಮರೆತು ಎಲ್ಲರೂ ಬೆಂಬಲಿಸ ಬೇಕು.
ಹಾಗೆಯೆ ಗ್ರಾಮ ಪಂಚಾಯತಿ ಚುನಾವಣೆಯನ್ನು ಬಹಿಸ್ಕರಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೆನೆ.
ಮಗ್ಗಲಮಕ್ಕಿಗಣೇಶ. ಜಿಲ್ಲಾದ್ಯಕ್ಷರು. ಕರ್ನಾಟಕ ರಾಷ್ಟ್ರ ಸಮಿತಿ. ಚಿಕ್ಕಮಗಳೂರು.
“ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. “ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ ” – ಎಂದು ಹೇಳಲಾಗುತ್ತದೆ (ಗಾಂಧೀಜಿ).
ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ. ಮತ್ತು ಒತ್ತಾಯ.
ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಒಂದು ಪರ್ವತ ಶ್ರೇಣಿಯಾಗಿದೆ. ಪಶ್ಚಿಮಘಟ್ಟದ ಶ್ರೇಣಿ, ಗುಜರಾತ್ ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಕನ್ಯಾಕುಮಾರಿಯವರೆಗೂ ಹಬ್ಬಿದೆ. ಇದು ಭಾರತದ ಪಶ್ಚಿಮ ರಾಜ್ಯಗಳನ್ನು ಒಳಗೊಂಡಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64, 280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ.