ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು. #avintvcom
1 min read
ದಿನಾಂಕ 17/12/2020 ರಂದು,
ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
**ಭೇಟಿಯ ಸಮಯದಲ್ಲಿ ಭದ್ರಾ ಕಾಡ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡು ಅಚ್ಚುಕಟ್ಟು ಪ್ರದೇಶದ ಅನ್ನದಾತರನ್ನು ನೇರವಾಗಿ ಭೇಟಿ ಮಾಡಿ ಅವರಿಗೆ ಎದುರಾಗಿರುವ ಅನಾನುಕೂಲಗಳ ಬಗ್ಗೆ ಅಧ್ಯಯನ ನಡೆಸಿದರ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.
**ಪ್ರವಾಸ ಕೈಗೊಂಡ ಸಂದರ್ಭದಲ್ಲಿ ರೈತರು ನೀಡಿರುವ ಅರ್ಜಿಗಳ ಬಗ್ಗೆ ವಿಶೇಷವಾಗಿ ಚರ್ಚಿಸಲಾಯಿತು.
ಮುಂಬರುವ ಆಯವ್ಯಯದಲ್ಲಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ, 2021/22ರ ಬಜೆಟ್ ನಲ್ಲಿ ಸೇರಿಸುವಂತೆ ಸುಮಾರು 425 ಕೋಟಿ ರೂಗಳ ಕ್ರಿಯಾ ಯೋಜನೆ ನೀಡಲಾಯಿತು.
**ಜಲಾಶಯದಿಂದ ಕಾಲುವೆಗಳಿಗೆ ಹರಿಸುತ್ತಿದ್ದ ನೀರು ಈಗಾಗಲೇ ನಿಲ್ಲಿಸಿದ್ದು, ಕಾಲುವೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ತಕ್ಷಣವೇ ಸುಮಾರು 25 ಕೋಟಿ ರೂಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.
**ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡುವುದರಿಂದ ಅಚ್ಚುಕಟ್ಟು ಭಾಗದ ರೈತರಿಗೆ ಸಾಕಷ್ಟು ವರ್ಷಗಳಿಂದ ಬಾಕಿ ಉಳಿದಿರುವ ಕಾಮಗಾರಿಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ಕೊಟ್ಟಂತಾಗುತ್ತದೆ ಜೊತೆಗೆ ರೈತರಿಗೆ ಎಲ್ಲಾ ರೀತಿಯಲ್ಲೂ ಮೂಲಭೂತ ಸೌಕರ್ಯ ಕಲ್ಪಿಸಿ ಕೊಟ್ಟಂತಾಗುತ್ತದೆ ಎಂದು ಗಮನ ಸೆಳೆಯುವ ಪ್ರಯತ್ನ ಮಾಡಲಾಯಿತು.
√√ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಶೀಘ್ರವೇ ಪ್ರಾಧಿಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಸೂಕ್ತ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.