ನಿತೇಶ ಪಾಟೀಲ ಹಾಗೂ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಡಾ.ಸುಶೀಲಾ ಬಿ.,ಅವರು ಹಸಿರು ಭಾವುಟ #avintvcom
1 min read
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಿವಿಧ ಕಾಲೆಜು ಎಲೆಕ್ಟೋಲ್ ಕ್ಲಬ್ ಗಳ ಸಹಯೋಗದಲ್ಲಿ ಜಿಲ್ಲಾ ಸ್ವಿಪ್ ಸಮಿತಿ ಇಂದು ಬೆಳಿಗ್ಗೆ ನಗರದಲ್ಲಿ ದಿನಾಚರಣೆ ನಿಮಿತ್ಯ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಡಾ.ಸುಶೀಲಾ ಬಿ.,ಅವರು ಹಸಿರು ಭಾವುಟ ತೋರಿ, ಚಾಲನೆ ನೀಡಿದರು.
ಜಾಥಾ ಕಾರ್ಯಕ್ರಮವು ನಗರದ ವಿವಿಧ ಬೀದಿಗಳ ಮೂಲಕ ಸಂಚರಿಸಿ, ಮಾರುಕಟ್ಟೆ ಪ್ರದೇಶದ ವಿವೇಕಾಂದ ಸರ್ಕಲ್ ದಲ್ಲಿ ಸಮಾವೇಶ ಗೊಂಡಿತು.
ಜಿಲ್ಲಾಧಿಕಾರಿಗಳು ಮತ್ತು ನೋಡೆಲ್ ಅಧಿಕಾರಿಗಳು ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.
ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಕಾಲೇಜು ಎಲೆಕ್ಟ್ರೋಲ್ ಕ್ಲಬ್ ಸದಸ್ಯರು, ಉಪನ್ಯಾಸಕರು ಭಾಗವಹಿಸಿದ್ದರು.
ಆಲೂರು ವೆಂಕಟರಾವ ವೃತ್ತದಲ್ಲಿ ಮಾನವ ಸರಪಳಿ ರೂಪಿಸಿ, ಮತದಾನ ಮಹತ್ವಸಾರುವ ಘೋಷಣೆಗಳ ಮೂಲಕ ಜಾಥಾ ಮುಕ್ತಾಯವಾಯಿತು.