day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಎಲ್ಪಿಜಿ ಸಿಲಿಂಡರ್ ಬೆಲೆ ಹೆಚ್ಚಳದ ವಿರುದ್ದ ಆಮ್ ಆದ್ಮಿ ಪಕ್ಷ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನೆ – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಎಲ್ಪಿಜಿ ಸಿಲಿಂಡರ್ ಬೆಲೆ ಹೆಚ್ಚಳದ ವಿರುದ್ದ ಆಮ್ ಆದ್ಮಿ ಪಕ್ಷ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನೆ

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳದ ವಿರುದ್ದ ಆಮ್ ಆದ್ಮಿ ಪಕ್ಷ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನೆ

ಸೌದೆಗಾದ್ರೂ ಸಬ್ಸಿಡಿ ಕೊಡು ಗುರು ಎನ್ನುವ ಘೋಷಣೆ ಮೂಲಕ ಸೌದೆ ಒಲೆಯ ಮೇಲೆ ಟೀ ತಯಾರಿಸಿ ವಿನೂತನ ಪ್ರತಿಭಟನೆ

ಬೆಂಗಳೂರು ಡಿಸೆಂಬರ್‌ 26: “ಸೌದೆಗಾದ್ರೂ ಸಬ್ಸಿಡಿ ಕೊಡು ಗುರು” ಎನ್ನುವ ಘೋಷವಾಕ್ಯಗಳನ್ನು ಕೂಗುತ್ತಾ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಸೌದೆ ಒಲೆಯಲ್ಲಿ ಟೀ ಮಾಡಿ ಹಂಚುವ ಮೂಲಕ ಪ್ರತಿಭಟನೆ ನಡೆಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಮಾತನಾಡಿ, ಡಿಸೆಂಬರ್ ತಿಂಗಳೊಂದರಲ್ಲೇ ಎರಡು ಬಾರಿ ಎಲ್‌ಪಿಜಿ ಸಿಲಿಂಡರ್ ದರವನ್ನು 100 ರೂಪಾಯಿಯಷ್ಟು ಹೆಚ್ಚಳ ಮಾಡಿ ಜನರ ಸುಲಿಗೆ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ದೋಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಾಕ್‌ಡೌನ್ ನೆಪ ಮಾಡಿಕೊಂಡು ಸಬ್ಸಿಡಿ ನೀಡುವುದನ್ನು ನಿಲ್ಲಿಸಿರುವ ಸರ್ಕಾರ ನೇರವಾಗಿ 20 ಸಾವಿರ ಕೋಟಿ ಉಳಿತಾಯ ಮಾಡಿದೆ ಆದರೂ ಬೆಲೆ ಹೆಚ್ಚಳ ಏಕೆ. ಮಾರುಕಟ್ಟೆಯಲ್ಲಿ ಸೌದೆಯ ಬೆಲೆಯೂ ಗಗನಕ್ಕೆ ಏರಿದೆ ಆದ ಕಾರಣ “ಸೌದೆಗಾದರೂ ಸಬ್ಸಿಡಿ ಕೊಡಿ” ಕನಿಷ್ಟ ಪಕ್ಷ ಎರಡು ಹೊತ್ತು ಊಟ ಮಾಡಿ ಜೀವ ಉಳಿಸಿಕೊಳ್ಳುತ್ತೇವೆ ಎಂದು ವ್ಯಂಗ್ಯವಾಡಿದರು.

ಒಲೆಯಲ್ಲಿ ಅಡುಗೆ ಮಾಡುವುದರಿಂದ ಪರಿಸರ ಮಾಲಿನ್ಯ ತಪ್ಪಿಸಬಹುದು ಎಂದು ಹೇಳಿ ಗ್ಯಾಸ್ ವಿತರಿಸಿದ ಮೋದಿಯವರು ಈಗ ಬಡವರನ್ನು ಸುಲಿಗೆ ಮಾಡುತ್ತಿದ್ದಾರೆ. ರೈತ, ಕಾರ್ಮಿಕ, ಮಹಿಳಾ ವಿರೋಧಿಯಾದ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಹೆಚ್ಚಳ ನಿರ್ಧಾರವನ್ನು ಹಿಂಪಡೆಯದಿದ್ದರೆ ಸೌದೆಯನ್ನು ಪ್ರಧಾನಿ ಕಚೇರಿಗೆ ಪಾರ್ಸಲ್ ಮಾಡಲಾಗುವುದು ಎಂದು ಹೇಳಿದರು.

ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಏನು ಎಂಬುದೇ ಅರ್ಥವಾಗುತ್ತಿಲ್ಲ, ಈ ದೇಶವನ್ನು ಸೂಪರ್ ಪವರ್ ಮಾಡುತ್ತೇವೆ ಎಂದು ಹೇಳುತ್ತಲೇ ಬಿಕಾರಿಗಳನ್ನಾಗಿ ಮಾಡುತ್ತಿದೆ, ಕಿಂಚಿತ್ತೂ ದೇಶ ಭಕ್ತಿ, ದೇಶದ ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದ ಜನರಿಂದ ಪ್ರಗತಿ ನಿರೀಕ್ಷಿಸಲು ಸಾಧ್ಯವೇ ಎಂದರು.

ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಹಿಳಾ ಘಟಕದ ಉಪಾಧ್ಯಕ್ಷರಾದ ಡಾ.ಮಾಯಾ ಪ್ರದೀಪ್, ವೈದ್ಯೆ ಪೂರ್ಣಿಮಾ ನಾಯ್ಡು, ಪ್ರತಿಮಾ ಮಲಾನಿ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್. ವಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

 

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author