ಎಂಕೆ ಹುಬ್ಬಳ್ಳಿಯ 11 ನೇ ವಾರ್ಡ್ ನ ಅಂಬೇಡ್ಕರ್ ಗಲ್ಲಿಯ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು #avintvcom
1 min read
ಎಂಕೆ ಹುಬ್ಬಳ್ಳಿಯ 11 ನೇ ವಾರ್ಡ್ ನ ಅಂಬೇಡ್ಕರ್ ಗಲ್ಲಿಯ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿಕೊಡಿ: ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಮನವಿ
ಸ್ಥಳ: ಎಂಕೆ ಹುಬ್ಬಳ್ಳಿ
ಹೌದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿ ಪಟ್ಟಣದ 11 ನೇ ವಾರ್ಡ್ ನ ಅಂಬೇಡ್ಕರ್ ಗಲ್ಲಿಯ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯು ಶಾಶ್ವತ ಸಮಸ್ಯೆಯಾಗಿ ಉಳಿದಿದ್ದು ಇರುತ್ತದೆ. ಈ ಸಮಸ್ಯೆ ಎಂಕೆ ಹುಬ್ಬಳ್ಳಿ ಗ್ರಾಮ ಪಂಚಾಯಿತಿ ಇದ್ದಾಗಿನಿಂದಲೂ ಈ ಸಮಸ್ಯೆಯು ಇದ್ದು ಸಿಮೆಂಟ್ ರಸ್ತೆ ಮಾಡಿರುವ ಕಾರಣ ರಸ್ತೆ ಹಾಳಾಗುತ್ತದೆ ಎಂಬ ಕಾರಣದಿಂದ ಇಲ್ಲಿ ಪೈಪ್ ಲೈನ್ ಹಾಕಲಾಗಿಲ್ಲ. ಆದ್ದರಿಂದ ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಹೊತ್ತು ತರುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇಲ್ಲಿನ ನಿವಾಸಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಆದ ಕಾರಣ ಇಂದು ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಭೇಟಿಕೊಟ್ಟು ಇಲ್ಲಿಯ ಸಮಸ್ಯೆಯ ಬಗ್ಗೆ ಪರಿಶೀಲನೆ ಮಾಡಿ ಈ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯ ವಾರ್ಡ್ ಸದಸ್ಯರು ಹಾಗೂ ಪಟ್ಟಣ ಪಂಚಾಯಿತಿ ಅದ್ಯಕ್ಶರು , ಮುಖ್ಯ ಅಧಿಕಾರಿಗಳ ಗಮನಕ್ಕೆ ತೆಗೆದುಕೊಂಡು ಬಂದರು. ಆದ್ದರಿಂದ ಇನ್ನಾದರೂ ಇಲ್ಲಿನ ನಿವಾಸಿಗಳ ಈ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಸಿಗುವುದೇ ಎಂಬುದನ್ನು ಕಾದು ನೋಡಬೇಕಿದೆ. 🖋️🙏😇 ವಂದನೆಗಳು. ಶ್ರೀ ಬಸವರಾಜು. ಪತ್ರಕರ್ತರು ಹಾಗೂ ಹೋರಾಟಗಾರರು. ವೀರಾಪುರ. 🙏🖋️