लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವತಿಯಿಂದ ಶ್ರಮಧಾನ… #avintvcom

1 min read
Featured Video Play Icon

ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವತಿಯಿಂದ ಶ್ರಮಧಾನ ಯೋಜನೆಯಡಿಯಲ್ಲಿ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ.

ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛಮಾಡುವ ಮೂಲಕ ಸಾರ್ವಜನಿಕವಾಗಿ ಜನ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ತಿಳಿಸಿದರು.

ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವತಿಯಿಂದ ಬೆಳ್ಳೂಟಿ  ಗ್ರಾಮದಲ್ಲಿರುವ  ದೇವಸ್ಥಾನ,ಮಸೀದಿ ,ಚರ್ಚ್ ಗಳ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿ ಮಾತನಾಡಿದರು.

ಸಾಮಾನ್ಯ ಜನರು ದೇವಸ್ಥಾನ,  ಮಸೀದಿ, ಚರ್ಚ್‍ಗಳ ಬಗ್ಗೆ ಪವಿತ್ರ ಭಾವನೆ ಹೊಂದಿರುತ್ತಾರೆ. ಆ ಜಾಗಗಳು ಮಲಿನವಾಗಲು ಬಳಸದಂತೆ ಗ್ರಾಮ ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಬರಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿ ಶ್ರಮದಾನ ಯೋಜನೆಯ ಅಡಿ   ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು,ಗ್ರಾಮಸ್ಥರ  ಮೂಲಕ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವುದಾಗಿ ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಗಳಲ್ಲಿ ಈ ಕಾರ್ಯವನ್ನು ಮಾಡುವ ಕೆಲಸಕ್ಕೆ ಮುಂದಾಗ ಬೇಕು ಎಂದರು.

 

ಈ ಸಂದರ್ಭದಲ್ಲಿ ಪಿಡಿಒ ಕ್ಯಾತ್ಯಯಿನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮ, ನೇತ್ರವತಿ, ಎಪಿಎಂಸಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮಸ್ಥರಾದ ಚಂದ್ರಣ್ಣ, ದೇವರಾಜು, ರಮೇಶ್, ಆನಂದ್, ಚಿಕ್ಕಮಾರಪ್ಪ,ರಾಮಾಂಜನಪ್ಪ, ಚನ್ನಕೃಷ್ಣ, ಧರ್ಮಸ್ಥಳ ಸಂಘದ ಜ್ಯೋತಿ, ವೆಂಕಟಲಕ್ಷ್ಮೀ ಹಾಗೂ ಮತ್ತಿತರರು ಹಾಜರಿದ್ದರು.

ವರದಿ .ಲೋಕೇಶ್.ಶಿಡ್ಲಘಟ್ಟ

About Author