ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ #avintvcom
1 min read
ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ
ಹಾಸನ ಜ.6 ( ಕರ್ನಾಟಕ ವಾರ್ತೆ):- ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಹಾಗೂ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅನುಷ್ಟಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಕಾಮಗಾರಿ ಆಯ್ದುಕೊಳ್ಳುವಾಗ ಅದರ ಅನುಕೂಲ ಪಡೆಯುವ ಜನಸಂಖ್ಯೆ ಅಗತ್ಯಗಳು ಅವಶ್ಯಕತೆಗಳ ಬಗ್ಗೆ ಗಮನ ಹರಿಸುವುದು ಮುಖ್ಯ ಎಂದರು.
ನಿಯಮ ವ್ಯಾಪ್ತಿಯೊಳಗೆ ಬರುವ ಕಾಮಗಾರಿ ಹಾಗೂ ಸೇವಾ ಕಾರ್ಯಗಳಿಗೆ ಮಾತ್ರ ಅನುದಾನ ವೆಚ್ಚ ಮಾಡಬೇಕು ಮಾಡಿದ ವೆಚ್ಚಗಳಿಗೆ ಸೂಕ್ತ ದಖಲಾತಿಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಅಂಗನವಾಡಿ ನಿರ್ಮಾಣ ಕಾರ್ಯದಲ್ಲಿ ಸಮ ಸ್ವರೂಪ ಇರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಮಂಜುನಾಥ್, ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಮಂಜುನಾಥ್, ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು