AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸರಕಾರಿ ಶಾಲೆಗಳ ದತ್ತು ಸ್ವೀಕಾರ #avintvcom

1 min read
Featured Video Play Icon

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸರಕಾರಿ ಶಾಲೆಗಳ ದತ್ತು ಸ್ವೀಕಾರ

ಗದಗ (ಕರ್ನಾಟಕ ವಾರ್ತೆ) ಜ.7 : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ನವಂಬರ್ 24 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಂದ ಸರ್ಕಾರಿ ಶಾಲೆಗಳ  ದತ್ತು ಸ್ವೀಕಾರ ಪತ್ರವನ್ನು ಕುಲಪತಿ ಪ್ರೊ. ವಿಷ್ಣುಕಾಂತ ಎಸ್ ಚಟಪಲ್ಲಿ ಪಡೆದುಕೊಡರು.

ಸರಕಾರಿ ಶಾಲೆಗಳ ದತ್ತು ಸ್ವೀಕಾರ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲೆಯ ಗದಗ, ರೋಣ ಮತ್ತು ಶಿರಹಟ್ಟಿ ತಾಲೂಕಗಳಿಗೆÀ ಸೇರಿದ ಒಟ್ಟು 11 ಗ್ರಾಮಗಳ 20 ಸರಕಾರಿ ಶಾಲೆಗಳನ್ನು ದತ್ತು ಸ್ವೀಕಾರ ಮಾಡಿಕೊಳ್ಳಲಾಗಿದ್ದು ಇದಕ್ಕೆ ಪೂರಕವಾಗಿ ಕುಲಸಚಿವರ ಅಧ್ಯಕ್ಷತೆಯಲ್ಲಿ ಸಂಚಾಲನ ಸಮಿತಿ ರಚನೆ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಸಮಿತಿಯು ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಲಿದೆ.

ಶಾಲೆಗಳ ಅಭಿವೃದ್ಧಿಗಾಗಿ ಮೊದಲು ವಿಶ್ವವಿದ್ಯಾಲಯದಲ್ಲಿ ಆಂತರಿಕ ಉಪಸಮಿತಿ ಮಾಡಿ ದತ್ತು ತೆಗೆದುಕೊಂಡ ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿಕೊಂಡು ವಿಶ್ಲೇಷಣೆ ಮಾಡಿ ಶಾಲೆಯಲ್ಲಿನ ಪ್ರಸ್ತುತ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಮುಂದಿನ ಶೈಕ್ಷಣಿಕ ಚಟುವಟಿಕೆಗಳ ಮತ್ತು ಶಾಲೆಯ ಅಭಿವೃದ್ಧಿಗಾಗಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆಂದು ನಮ್ಮ ವಿಶ್ವವಿದ್ಯಾಲಯವು ಕೈಜೋಡಿಸುತ್ತದೆ.

ಗುಣಮಟ್ಟದ ಶಿಕ್ಷಣಕ್ಕಾಗಿ ಬೇಕಾದಂತ ಸೌಲಭ್ಯಗಳನ್ನು ಒದಗಿಸಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಗಣಿತ, ಇಂಗ್ಲೀಷ್ ಹಾಗೂ ಇನ್ನಿತರೆ ಅಗತ್ಯವಿರುವ ವಿಷಯಗಳ ವಿಶೇಷ ತರಗತಿಗಳನ್ನು ತೆಗೆದುಕೊಳ್ಳುವುದು ಮತ್ತು ಎಸ್.ಎಸ್.ಎಲ್.ಸಿ  ನಂತರದ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕ್ಷೇತ್ರಗಳಲ್ಲಿನ ಅವಕಾಶಗಳ ಕುರಿತಾಗಿ ವಿಶ್ವವಿದ್ಯಾಲಯದ ನೈಪುಣ್ಯ ಕೇಂದ್ರದಿಂದ ಕೌಶಲ್ಯ ತರಬೇತಿಯನ್ನು ಕೊಡುವದು ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳವದರ ಮೂಲಕ ವಿಶ್ವವಿದ್ಯಾಲಯzವು ಕೈಜೋಡಿಸುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳು ತಿಳಿಸಿದರು. (ಪೋಟೊ ಲಗತ್ತಿಸಲಾಗಿದೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author