ಸರ್ಕಾರಕ್ಕೆ ವಂಚನೆ ಮಾಡಿ ಸರ್ಕಾರದ ಜಮೀನನ್ನು ಮಾರಾಟ ಮಾಡಿ ಹಣ ಸಂಪಾದನೆ #avintvcom
1 min read
ಸರ್ಕಾರಕ್ಕೆ ವಂಚನೆ ಮಾಡಿ ಸರ್ಕಾರದ ಜಮೀನನ್ನು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿರುವರು ಮೇಲೆ ಸೂಕ್ತ ಕಾನೂನು ಕ್ರಮ ಸರ್ಕಾರ ವಶಕ್ಕೆ ಪಡೆಯುವಂತೆ ಆಗ್ರಹಿಸಿ ಮನವಿ
ಅಗಸವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ಸರ್ವೆ ನಂಬರ್ 167 ರಲ್ಲಿರುವ 2033 ಎಕರೆ 30 ಗುಂಟೆ ಜಮೀನಿನಲ್ಲಿ ಸರ್ಕಾರವು ಈ ಜಮೀನನ್ನು ಮುಳುಗಡೆ ಸಂತ್ರಸ್ತರಿಗೆ ಮತ್ತು ಗೌಳಿ ಜನಾಂಗದವರಿಗೆ ಎಂದು ಮೀಸಲಿಟ್ಟಿದ್ದು ಆದರೆ ಈ ಕೆಲದಿನಗಳಿಂದ ಗ್ರಾಮ ವ್ಯಾಪ್ತಿಗೆ ಸಂಬಂಧಪಟ್ಟಂತೆ ಅಲ್ಲಿನ ಕೆಲ ಮುಖಂಡರು ಸೇರಿದಂತೆ ಸರ್ಕಾರಕ್ಕೆ ಸಂಬಂಧಪಟ್ಟ ಜಮೀನನ್ನು ಸುಮಾರು ಮೂರು ಎಕರೆಗಿಂತಲೂ ಹೆಚ್ಚಾಗಿ ಸಾರ್ವಜನಿಕರಿಗೆ ಅಗ್ರಿಮೆಂಟ್ ಮೂಲಕ ಮಾರಾಟ ಮಾಡಿಕೊಂಡಿದ್ದು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಹಲವಾರು ಬಾರಿ ಗಮನಕ್ಕೆ ತಂದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಜರುಗಿಸುವುದಿಲ್ಲ ಆದ್ದರಿಂದ ಇಂದು ದಿನಾಂಕ 8-1-2021ರಂದು ನಮ್ಮ ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿಯ ಜಿಲ್ಲಾ ಸಮಿತಿಗೆ ಸಂಬಂಧಪಟ್ಟಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೇಶವಮೂರ್ತಿ ಸರ್ ತಾಲೂಕ ಅಧ್ಯಕ್ಷರಾದ H.N. ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಮತ್ತು ಸಮಿತಿಗೆ ಸಂಬಂಧಪಟ್ಟಂತೆ ಕೆಲ ಕಾರ್ಯಕರ್ತರು ಹಮ್ಮಿಕೊಂಡು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಕ್ಕೆ ವಂಚನೆ ಮಾಡಿ ಸರ್ಕಾರದ ಜಮೀನನ್ನು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿರುವರು ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಮಾರಾಟ ಮಾಡಿರುವ ನಿವೇಶನಗಳು ಸರ್ಕಾರ ವಶಕ್ಕೆ ಪಡೆಯುವಂತೆ ಸಮಿತಿಯು ಆಗ್ರಹಿಸಿ ಮನವಿ ಸಲ್ಲಿಸಲಾಯಿತು