ಕೋವಿಡ್ ಲಸಿಕೆ ಪ್ರಯೋಗದ ಪ್ರದರ್ಶನಕ್ಕೆ ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಚಾಲನೆ ನೀಡಿದರು.#avintvcom
1 min readಧಾರವಾಡ : ಕೋವಿಡ್ ಲಸಿಕೆ ಅಣಕು ಪ್ರಯೋಗಕ್ಕೆ ಚಾಲನೆ
-ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಧಾರವಾಡ (ಕರ್ನಾಟಕ ವಾರ್ತೆ) ಜ.08: ಕೋವಿಡ್ ಲಸಿಕೆ ಪ್ರಯೋಗದ ಅಣಕು ಪ್ರದರ್ಶನಕ್ಕೆ ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಚಾಲನೆ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಎಂಟು ಆಸ್ಪತ್ರೆಗಳಲ್ಲಿ ಇಂದು ಲಸಿಕಾ ಪ್ರಯೋಗ ನಡೆಸಲಾಗುತ್ತಿದೆ. ಪ್ರತಿಯೊಂದು ಆಸ್ಪತ್ರೆಯಲ್ಲಿ 25 ಆರೋಗ್ಯ ಸಿಬ್ಬಂದಿಯು ಉಪಸ್ಥಿತಿ ಇರುವರು ಹಾಗೂ ಲಸಿಕೆ ನೀಡಲು ಸ್ಥಾಪಿಸಲಾಗಿರುವ, ಪ್ರವೇಶ ಮತ್ತು ನೋಂದಣಿ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿ ಇರುತ್ತದೆ, ಲಸಿಕೆಯನ್ನು ನೀಡಿದ ನಂತರ 30 ನಿಮಿಷ ರೋಗಿಯ ಆರೋಗ್ಯವನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ರೋಗಿಯ ಆರೋಗ್ಯದಲ್ಲಿ ವೈಪರಿತ್ಯ ಉಂಟಾದರೆ ತಕ್ಷಣ ತುರ್ತು ಚಿಕಿತ್ಸೆ ನೀಡಲು ಸಕಲ ಸಿದ್ದತೆಗಳನ್ನು ಮಾಡಿಕೂಂಡಿದೆ ಹಾಗೂ ಹೆಚ್ಚಿನ ಚಿಕಿತ್ಸೆ ನೀಡಲು ಬೇರೆ ಆಸ್ಪತ್ರೆಗೆ ರೋಗಿಯನ್ನು ಸ್ಥಳಾಂತರಿಸಲು 3 ಅಂಬ್ಯುಲೆನ್ಸ್ಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ಕೊವಿನ್ ಸಾಫ್ಟ್ವೇರ್ ನಲ್ಲಿ ನೋಂದಣಿ ಮಾಡುವ ಕ್ರಮ, ಲಸಿಕೆಯ ಸಂಗ್ರಹ, ಸಾಗಣೆ, ಡಿ-ಫ್ರೀಜ್ ಕಾರ್ಯಕ್ಕೆ ಮಾಡಿಕೊಂಡಿರುವ ಸಿದ್ಧತೆಗಳು ಹಾಗೂ ತಾಲೀಮು ಕಾರ್ಯಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು.