ಮಂಗಳೂರಿನ ವಿವಿಧ ಬೀಚ್ ಪೊಲೀಸ್ ದಾಳಿ:ಅಮಲು ಪದಾರ್ಥ ವಶ ಹಲವರ ಬಂಧನ #avintvcom
1 min read
ಮಂಗಳೂರಿನ ವಿವಿಧ ಬೀಚ್ ಪೊಲೀಸ್ ದಾಳಿ:ಅಮಲು ಪದಾರ್ಥ ವಶ ಹಲವರ ಬಂಧನ
ಮಂಗಳೂರು:ಇಲ್ಲಿನ ವಿವಿಧ ಬೀಚಿನಲ್ಲಿ ಅಮಲು ಪದಾರ್ಥ ಸೇವಿಸುತ್ತಿದ್ದ ಹಲವರನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರ ಸೂಚನೆಯಂತೆ ನಿನ್ನೆ ಪೊಲೀಸರು ಹಠಾತ್ತನೇ ಬೀಚ್ ಪ್ರದೇಶಕ್ಕೆ ದಾಳಿ ಮಾಡಿ ಅಮಲು ಪದಾರ್ಥ ಸೇವಿಸುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪಣಂಬೂರು,ಸೋಮೇಶ್ವರ, ತಣ್ಣೀರುಬಾವಿ ಮತ್ತು ಸುರತ್ಕಲ್ ಬೀಚ್ಗಳಿಗೆ ರಾತ್ರಿ ವೇಳೆ ಏಕಕಾಲದಲ್ಲಿ ದಾಳಿ ಮಾಡಿದ ಪೊಲೀಸರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ 70 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವೇಳೆ, ಕತ್ತಲಾದರೂ ಬೀಚ್ಗಳಲ್ಲಿ ಅನಗತ್ಯ ತಿರುಗಾಡುವವರನ್ನು ವಿಚಾರಣೆ ನಡೆಸಲಾಯಿತು. ಈ ವೇಳೆ ಹಲವರಲ್ಲಿ ಮದ್ಯದ ಬಾಟಲಿಗಳು ಸಿಕ್ಕಿದೆ. ಸುಮಾರು 65 ಮಂದಿ ಮದ್ಯ ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಬೀಚಿನಲ್ಲಿ ಪೊಲೀಸ್ ದಾಳಿ ಬೀಚ್ನಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರ 17 ಬೈಕ್ ಮತ್ತು 7 ಕಾರುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರಲ್ಲಿ 12 ಬೈಕ್ ಮತ್ತು 2 ಕಾರುಗಳಲ್ಲಿ ಹಳೆ ಪ್ರಕರಣಗಳು ಬಾಕಿಯಿದೆ. ಹತ್ತಕ್ಕಿಂತ ಹೆಚ್ಚು ಬೈಕ್ಗಳಿಗೆ 10 ಕ್ಕಿಂತ ಹೆಚ್ಚಿನ ಪ್ರಕರಣಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಬೀಚಿನಲ್ಲಿ ಪೊಲೀಸ್ ದಾಳಿ ಬೀಚ್ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರ ದೂರಿನ ಆಧಾರದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಮಾರ್ಗದರ್ಶನದಲ್ಲಿ ಡಿಸಿಪಿ, ಎಸಿಸಿಗಳ ಮೇಲ್ವಿಚಾರಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ಗಳು ತಲಾ 20 ಪೊಲೀಸ್ ಸಿಬ್ಬಂದಿಗಳ ತಂಡ ರಚಿಸಿ ಈ ದಾಳಿ ನಡೆಸಲಾಗಿತ್ತು. ವಶಕ್ಕೆ ತೆಗೆದುಕೊಂಡವರನ್ನು ಮಂಗಳೂರಿನ ಪುರಭವನದ ಸಭಾಂಗಣದಲ್ಲಿ ಕೂರಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಎಚ್ಚರಿಕೆ ನೀಡಿದರು.
ದಾಳಿಯ ವೇಳೆಯಲ್ಲಿ ಒಂದು ಗಾಂಜಾ ಪ್ರಕರಣ ಪತ್ತೆಯಾಗಿದೆ. ಗಾಂಜಾಕ್ಕೆ ಚಾಕಲೇಟ್ ಮಿಶ್ರಣ ಮಾಡಿ ಟ್ಯಾಬ್ಲೆಟ್ ರೀತಿ ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಪತ್ತೆಯಾಗಿದೆ.