AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪೆಟ್ರೋಲ್ ಬೆಲೆ ೮೭ ರೂ ಡೀಸಲ್ ೭೮ ರೂ ಅಡಿಗೆ ಅನಿಲ ೮೦೦ ರೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಜನ ಸಾಮಾನ್ಯರ ಬದುಕು ಬೀದಿಗೆ ಬೀಳುತ್ತಿದೆ#avintvcom

1 min read

ಕೋಲಾರ: ಕೊರೊನಾ ವೈರಸ್ ಹಾವಳಿಯಿಂದ ತತ್ತರಿಸಿ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ಪೆಟ್ರೋಲ್ ಡೀಸಲ್, ಅಡಿಗೆ ಅನಿಲ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದಕ್ಕೆ ಕಡಿವಾಣ ಹಾಕಿ ಜನ ಸಾಮಾನ್ಯರ ಹಿತಕಾಯಬೇಕೆಂದು ರೈತಸಂಘದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಕೇಂದ್ರ ಸರ್ಕಾರದ ಅಣುಕು ಶವಯಾತ್ರೆ ನಡೆಸಲಾಯಿತು.

ಬಳಿಕ ಮೆಕ್ಕೆ ವೃತ್ತದಲ್ಲಿ ಮೋದಿ ಪ್ರತಿಕೃತಿಹನ, ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಕೊಂಡಪ್ಪ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವವಹಿಸಿ ಮಾತaನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಸ್ವಾತಂತ್ರö್ಯ ಬಂದು ದಶಕಗಳು ಕಳೆದರು ಜನ ಸಾಮಾನ್ಯರ ಕಷ್ಟಗಳು ಮಾತ್ರ ಬಗೆಹರಿಸುವಲ್ಲಿ ಯಾವುದೇ ರಾಜಕೀಯ ಪಕ್ಷಗಳು ಪ್ರಯತ್ನ ಪಡುತ್ತಿಲ್ಲ.

. ಈ ಏರಿಕೆಯಿಂದ ರೈತರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದ್ದು, ಈಗಾಗಲೇ ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ಸಿಗದೆ ಕಂಗಾಲಾಗಿದ್ದ ರೈತನು ಡೀಸಲ್ ಬೆಲೆ ಏರಿಕೆಯಿಂದ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾನೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಯಾವುದೋ ಒಂದು ನೆಪ ಜನ ಸಾಮಾನ್ಯರನ್ನು ಯಾಮಾರಿಸಿ ಬಡವರ ಜೀವನದ ಜೊತೆ ಚಲ್ಲಾಟ ವಾಡುತ್ತಿರುವುದು ಕಾಯಕವಾಗಿದೆ ಜನರ ಕಷ್ಟಗಳನ್ನು ನಿವಾರಣೆ ಮಾಡುತ್ತೇನೆ, ದೇಶವನ್ನು ಅಭಿವೃದ್ದಿಯತ್ತ ಕೊಂಡೋಯುತ್ತೇನೆAದು ಅಧಿಕಾರ ಸ್ವೀಕಾರ ಮಾಡಿ ವರ್ಷಗಳೇ ಕಳೆದರೂ ಜನ ಸಾಮಾನ್ಯರ ಸಮಸ್ಯೆಗಳು ಹೆಚ್ಚಾಗಿವೆ ಹೊರೆತು ಕಡಿಮೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಏರಿಕೆ ನೆಪದಿಂದ ಸತತವಾಗಿ ಗಗನ್ನಕ್ಕೇರುತ್ತಿರುವ ಪೆಟ್ರೋಲ್ ಡೀಸಲ್ ಜೊತೆಗೆ ಅಡಿಗೆ ಅನಿಲದ  ಬೆಲೆಗೆ ಕಡಿವಾಣ ಹಾಕುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗುತ್ತಿದೆ.

ಇದರಿಂದ ಜನ ಸಾಮಾನ್ಯರ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಒಂದು ಕಡೆ ನಾನು ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಲೆಯಿಲ್ಲದೆ ಆತ್ಮಹತ್ಯೆ ಇತ್ತ ರೈತರು ಮುಖ ಮಾಡುತ್ತಿದ್ದಾರೆ. ಕೋಟಿ ಕೋಟಿ ಹಣವನ್ನು ಅಂಬಾನಿ ಆದಾನಿಗಳಿಗೆ ಸಾಲದ ರೂಪದಲ್ಲಿ ಕಾರ್ಪೋರೇಟ್ ಕಂಪನಿಗಳ ಬೆಂಬಲವಾಗಿ ನಿಂತಿದ್ದಾರೆ ಎಂದು ಆರೋಪಿಸಿದರು.

ಈಗ ತೈಲಬೆಲೆಗಳ ಏರಿಕೆಗೆ ಕಡಿವಾಣ ಹಾಕುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿರುವುದರಿಂದ ಜನ ಸಾಮಾನ್ಯರು ಸರ್ಕಾರದ ವಿರುದ್ಧ ಇಡೀ ಶಾಪಹಾಕುತ್ತಿದ್ದಾರೆ. ಕೂಡಲೇ ಮಾನ್ಯ ಪ್ರಧಾನ ಮಂತ್ರಿಗಳು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧಿಸಿ  ಗಗನ್ನಕ್ಕೇರುತ್ತಿರುವ ತೈಲಬೆಲೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಈ ಹೋರಾಟದಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ನಳಿನಿ.ವಿ ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಕಿರಣ್, ಮಂಗಸಂದ್ರ  ನಾಗೇಶ್,ತಿಮ್ಮಣ್ಣ, ನಲ್ಲಾಂಡಹಳ್ಳಿ ಕೇಶವ, ಮಾಲೂರು ತಾ.ಅ ವೆಂಕಟೇಶ್,  ಆಶ್ವತಪ್ಪ, ನಾರಾಯಣಪ್ಪ, ಸುಪ್ರೀಂಚಲ, ವಕ್ಕಲೇರಿ ಹನುಮಯ್ಯ,  ವಿನೋದ್, ನವೀನ್, ಹರೀಶ್, ಲಕ್ಷಣ್, ವೇಣು, ಜಗದೀಶ್, ಮುನಿರಾಜು, ಗಣೇಶ್, ನರೇಂದ್ರ, ಮುಂತಾದವರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author