ಸಕ್ಕರೆ ಗೊಲ್ಲಹಳ್ಳಿ ಗ್ರಾಮದಲ್ಲಿಅಕ್ಕ ಮಾಯಾವತಿ ಯವರ 65 ನೇ ವರ್ಷದ ಹುಟ್ಟುಹಬ್ಬ ಆಚರಣೆ. #avintvcom
1 min read
ಸಕ್ಕರೆ ಗೊಲ್ಲಹಳ್ಳಿ ಗ್ರಾಮದಲ್ಲಿ
ಅಕ್ಕ ಮಾಯಾವತಿ ಯವರ
65 ನೇ ವರ್ಷದ ಹುಟ್ಟುಹಬ್ಬ ಆಚರಣೆ.
ಹೌದು ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಕ್ಕರೆ ಗೊಲ್ಲಹಳ್ಳಿ ಗ್ರಾಮದಲ್ಲಿ ಕೇಕ್ ಕಟ್ ಮಾಡುವುದರ ಮೂಲಕ ಬಹುಜನ ಸಮಾಜ ಪಾರ್ಟಿಯ ವತಿಯಿಂದ ಅಕ್ಕ ಮಾಯಾವತಿ ಯವರ 65 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ವಿಶೇಷವಾಗಿ ಕಾರ್ಯಕ್ರಮದಲ್ಲಿ ಪ್ರೊಜೆಕ್ಟರ್ ಮೂಲಕ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಧಾರವಾಹಿಯನ್ನು ಗ್ರಾಮದ ಜನರಿಗೆ ತೋರಿಸಲಾಯಿತು. ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿಂದಾಂತಗಳನ್ನು ಗ್ರಾಮದ ಮಕ್ಕಳಿಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಯುವಕರಿಗೆ ಟಿ ಶರ್ಟ್ ವಿತರಿಸಿ ಮಾತನಾಡಿ ಇಂದಿನ ಯುವ ಪೀಳಿಗೆ ಕ್ರಿಮಿನಲ್ ಆಕ್ಟಿವಿಟೀಸ್ ಗೆ ತಲುಪುತಿದ್ದಾರೆ ಆದ್ದರಿಂದ ನಾವು ಮಕ್ಕಳಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ತತ್ವಗಳನ್ನು ಸಾರುತ್ತಿದ್ದೇವೆ ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಾರ್ಟಿ ಯ ನಗರ ಅದ್ಯಕ್ಷರು ಸುರೇಶ್ ಹಾಗೂ ಅದ್ಯಕ್ಷ ಆಂಜನಪ್ಪ. ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್.ಎಲ್ಲಾ ಪದಾಧಿಕಾರಿಗಳು. ಸದಸ್ಯರು ಹಾಗೂ ಗ್ರಾಮಸ್ಥರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.