AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಾವಣಗೆರೆಯಲ್ಲಿ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆ #avintvcom

1 min read
Featured Video Play Icon

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಸಂಸದರಾದ ಶ್ರೀ ಜಿ.ಎಮ್. ಸಿದ್ದೇಶ್ವರ ಅವರು ದಿನಾಂಕ 18-1-2021 ರಂದು ಬೆಳಿಗ್ಗೆ ಮಾಡಿದರು.

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ನಿಗಮದ ಬಸ್ಸುಗಳ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕರಾದ ಶ್ರೀ ಎಂ.ಚಂದ್ರಪ್ಪ ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾದ ಎಸ್. ಎ.ರವೀಂದ್ರನಾಥ ವಹಿಸಿದ್ದರು.

ಮಾಯಕೊಂಡ ಶಾಸಕರಾದ ಎನ್. ಲಿಂಗಣ್ಣ, ನವಲಗುಂದ ಶಾಸಕರು ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾದ ಶ್ರೀ ಶಂಕರ್ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬಿಳಗಿ  ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

06

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author