AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ವಿದ್ಯಾರ್ಥಿ ಪರಿಷತ್ ನಿಂದ ಮಡಿಕೇರಿಯಲ್ಲಿ ಬೃಹತ್ ತಿರಂಗಾ ಯಾತ್ರೆ #avintvcom

1 min read
Featured Video Play Icon

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ  ಮಡಿಕೇರಿಯಲ್ಲಿ ಬೃಹತ್ ತಿರಂಗಾ ಯಾತ್ರೆ

ಕೊಡಗು: ವೀರಸನ್ಯಾಸಿ ಸ್ವಾಮಿ ವಿವೇಕಾನಂದರ 158 ನೇ ಜಯಂತಿಯ ಪ್ರಯುಕ್ತ  ಎಬಿವಿಪಿ ನೇತೃತ್ವದಲ್ಲಿ  ವಿದ್ಯಾರ್ಥಿಗಳು  ಮಡಿಕೇರಿ ನಗರದ ಸರಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಕೊಡವ ಸಮಾಜದ ಸಭಾ ವೇದಿಕೆಯ ತನಕ 400 ಮೀಟರ್ ಉದ್ದದ ಬೃಹತ್ ತಿರಂಗಯಾತ್ರೆಯ ಮೂಲಕ    ವಿವೇಕಾನಂದರ ಸಂದೇಶಗಳನ್ನು ಸಾರಿದರು.

ವಿವಿಧ ಕಾಲೇಜಿನ ವಿದ್ಯಾರ್ಥಿಗಳು,ಎಬಿವಿಪ ಕಾರ್ಯಕರ್ತರು ಬೃಹತ್ ಮೆರವಣಿಗೆ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿವೀಕನಂದರ ಸಂದೇಶ ಸಾರುತ್ತಾ,ಜಯಘೋಷದೊಂದಿಗೆ ತಿರಂಗಯಾತ್ರೆ ನಡೆಸಿದರು. ನಂತರ ನಗರದ ಕೊಡವ ಸಮಾಜದ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮವನ್ನು  ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಬಿವಿಪಿ ಮಂಗಳೂರು ವಿಭಾಗ ಪ್ರಮುಖರಾದ ಶ್ರಿ ಕೇಶವ ಬಂಗೇರರವರು ಉದ್ಘಾಟಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನಾಡಿದ  ಎಬಿವಿಪಿ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರೇಶ್ ಅಜ್ಜಣ್ಣನವರ್  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ  ವಿಚಾರಧಾರೆ ಹಾಗೂ ವಿವೇಕಾನಂದರ ಕನಸಿನ ಭಾರತದ ಕುರಿತು ವಿದ್ಯಾರ್ಥಿಗಳಿಗೆ  ತಿಳಿಸಿಕೊಟ್ಟರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author