ಜೆಡಿಎಸ್ ರಾಜ್ಯ ಕುಮಾರಸ್ವಾಮಿ ಅವರ 33ನೇ ಹುಟ್ಟು ಹಬ್ಬದ ಸಿಹಿ ವಿತರಿಸಿ ಸಂಭ್ರಮಿಸಿದರು ..#avintvcom
1 min read
ಯುವಸಾರಥಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ 33ನೇ ಹುಟ್ಟು ಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು ..
ಕೆ.ಆರ್.ಪೇಟೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಯುವಘಟಕದ ಅಧ್ಯಕ್ಷ ಕೆ.ಎಸ್.ಸಂತೋಷ್ ಅವರ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಫಲು ವಿತರಿಸಿ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಲಾಯಿತು…
ಯುವ ಸಾರಥಿ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಹೆಚ್.ಟಿ.ಮಂಜು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಅಧ್ಯಕ್ಷ ಬಿ.ಎಲ್.ದೇವರಾಜು, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಾಯತ್ರಿರೇವಣ್ಣ, ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಕೀಲ ಕುರುಬಹಳ್ಳಿ ನಾಗೇಶ್, ಎಪಿಎಂಸಿ ಅಧ್ಯಕ್ಷ ಚಂದ್ರಹಾಸ, ಮಾಜಿಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಮುಖಂಡರಾದ ಬಸ್ ಕೃಷ್ಣೇಗೌಡ, ಸಂಗಾಪುರ ಶಶಿಧರ, ಅಕ್ಕಿಹೆಬ್ಬಾಳು ರಘು, ಹರಳಹಳ್ಳಿ ಲೋಕೇಶ್, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಯಗಚಗುಪ್ಪೆ ಕುಮಾರ್, ಪ್ರತಾಪ್ ಸೇರಿದಂತೆ ನೂರಾರು ಕಾರ್ಯಕರ್ತರು ನಿಖಿಲ್ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದ್ದರು…
ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ .