ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಅಭಿವೃದ್ಧಿ #avintvcom
1 min read
ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಅಭಿವೃದ್ಧಿ ಮತ್ತು ಜನಪರ ಕೆಲಸ ಕಾರ್ಯವೈಖರಿಯನ್ನು ಹಾಗೂ ಬಿಜೆಪಿ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ, ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ವಾರ್ಡಿನಲ್ಲಿ ಸತತ 5 ನೇ ಬಾರಿ ಜಯಗಳಿಸಿ ಸೋಲಿಲ್ಲದ ಸರದಾರ ಎಂದೆನಿಸಿಕೊಂಡಂತಹ ಹಿರಿಯ ಸದಸ್ಯರಾದ ಶ್ರೀ ವಾಸುದೇವ ಭಟ್ ಇವರು ತನ್ನ ಬೆಂಬಲಿಗರೊಂದಿಗೆ ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಶ್ರೀ ಸುನಿಲ್ ಆಳ್ವ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಈಶ್ವರ್ ಕಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಬಿಜೆಪಿ ಮುಖಂಡರಾದ ಗೋಪಾಲ್ ಶೆಟ್ಟಿಗಾರ್,ಲಕ್ಷ್ಮಣ್ ಪೂಜಾರಿ, ದಯಾನಂದ ಪೈ, ಶ್ರೀನಾಥ್ ಸುವರ್ಣ,ಸೂರಜ್ ಜೈನ್, ಸಂತೋಷ್ ಶೆಟ್ಟಿ, ದಿವ್ಯವರ್ಮ ಬಲ್ಲಾಳ್, ರಾಜೇಶ್ವರ ನಾಯ್ಕ್ ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.