AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನವದೆಹಲಿಯಲ್ಲಿ ರೈತರು ಭೂಸುಧಾರಣಾ ಕಾಯ್ದೆಗಳ ಜಾರಿಯನ್ನು ವಿರೋಧಿಸಿ ಗಣರಾಜ್ಯೋತ್ಸವ #avintvcom

1 min read
Featured Video Play Icon

ನವದೆಹಲಿಯಲ್ಲಿ ರೈತರು ಭೂಸುಧಾರಣಾ ಕಾಯ್ದೆಗಳ ಜಾರಿಯನ್ನು ವಿರೋಧಿಸಿ  ಗಣರಾಜ್ಯೋತ್ಸವ ಪೆರೇಡ್ ಗೆ ಪರ್ಯಾಯವಾಗಿ ಟ್ರ್ಯಾಕ್ಟರ್ ಪೆರೇಡ್ ನಡೆಸುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಕೆ.ಆರ್.ಪೇಟೆ ಪಟ್ಟಣದಲ್ಲಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತ ಬಾಂಧವರು ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಕೊಳವೆ ಬಾವಿಗಳ ಮೆಕ್ಯಾನಿಕ್ ಗಳು ಬೃಹತ್ ಟ್ರ್ಯಾಕ್ಟರ್ ಗಳ ಮೆರವಣಿಗೆ ನಡೆಸಿದರು …

 

ಕೆ.ಆರ್.ಪೇಟೆ ಪಟ್ಟಣದ ಮೈಸೂರು ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಟ್ರಾಕ್ಟರ್ ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ರಸ್ತೆತಡೆ ನಡೆಸಿದ ರೈತ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಂದಿನಿ ಜಯರಾಂ ಸ್ವತಃ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಬಂದು ಪ್ರತಿಭಟನಾ ನಿರತ ರೈತರೊಂದಿಗೆ ತಾವೇ ಖುದ್ದಾಗಿ ಟ್ರ್ಯಾಕ್ಟರ್ ಚಾಲನೆ ಮಾಡಿ ಸೈ ಎನಿಸಿಕೊಂಡರು …

ರೈತ ಮುಖಂಡರಾದ ಮುದುಗೆರೆ ರಾಜೇಗೌಡ, ಕೆ.ಆರ್.ಜಯರಾಂ, ಮುದ್ದುಕುಮಾರ್, ಲಕ್ಷ್ಮೀಪುರ ಜಗಧೀಶ್, ಬೂಕನಕೆರೆ ನಾಗರಾಜು,  ತಾಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್, ದಲಿತ ಮುಖಂಡ ಡಾ.ಬಸ್ತಿರಂಗಪ್ಪ, ಬಂಡಿಹೊಳೆ ರಮೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಕೆ.ಆರ್.ಪೇಟೆ ಮತ್ತು ಹೊಸಹೊಳಲು ಅವಳಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ನೂರಾರು ಟ್ರ್ಯಾಕ್ಟರ್ ಗಳ ಪೆರೇಡ್ ನಡೆಸಿದ ರೈತಬಾಂಧವರು ಶ್ರೀರಂಗ ಚಿತ್ರಮಂದಿರದ ಆವರಣದಲ್ಲಿ ಬಹಿರಂಗ ಸಭೆ ನಡೆಸಿ ಕೇಂದ್ರ ಸರ್ಕಾರವು ರೈತವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳ ಜಾರಿ ಕೈಬಿಡಬೇಕು. ಪ್ರಧಾನಿ ನರೇಂದ್ರ ಮೋಧಿ ಅವರು ದೇಶದ ಅನ್ನಧಾತರಾದ ರೈತರ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು …

ವರದಿ.ಡಾ.ಕೆ.ಆರ್.ನೀಲಕಂಠ .

ಕೃಷ್ಣರಾಜಪೇಟೆ . ಮಂಡ್ಯ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author