ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇವರಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. #avintvcom
1 min read
ಇಂದು ಜಮಖಂಡಿ ನಗರದ ಬಸ್ ನಿಲ್ದಾಣ ದಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇವರಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
ಪ್ರತಿದಿನ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಇರದ ಕಾರಣ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ.
ಆದಕಾರಣ ಕೆಎಸ್ಸಾರ್ಟಿಸಿ ಇವರಿಂದ ಪ್ರತಿ ಹಳ್ಳಿಗಳಿಂದ ಬರುವಂತ ವಿದ್ಯಾರ್ಥಿಗಳಿಗೆ ಬಸ್ಸಿನ ಅನುಕೂಲ ಮಾಡಿಕೊಡಬೇಕು ಬಸ್ ಪಾಸಿನ ವ್ಯವಸ್ಥೆಯನ್ನು ಮಾಡಬೇಕು ಮತ್ತು ಹಳೆಯ ಪಾಸಿನ ಮೇಲೆ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಬರುವ ಹಾಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಬೇಡಿಕೆಗಳೊಂದಿಗೆ ಮನವಿಯನ್ನು ಸಲ್ಲಿಸಿದರು.